ಬಳ್ಳಾರಿ : ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ 60 ವರ್ಷದ ವ್ಯಕ್ತಿ ಜೂನ್ 22 ರಂದು ಹಪ್ಪಳ ಮಾರಿಕೊಂಡು ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ :
ಎತ್ತರ 6.2 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಮತ್ತು ಬಿಳಿ ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಗೀರುಗಳುಳ್ಳ ಬಣ್ಣದ ತುಂಬು ತೋಳಿನ ಬಿಳಿ ಬಣ್ಣದ ಅಂಗಿ ಮತ್ತು ಪಾಚಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕಿವುಡ ಮತ್ತು ಮೂಗನಾಗಿರುತ್ತಾನೆ.
ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯ ಆದಲ್ಲಿ ತಕ್ಷಣವೇ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Leave a comment