Home ಶಿಕ್ಷಣ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಶಿಕ್ಷಣ

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Share
Share

ಬಳ್ಳಾರಿ :  ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.