ಅರಸನಾಳು ಎಚ್.ಶಿವಾನಂದಗೆ ‘ಬಸವ ಚೇತನ ಪ್ರಶಸ್ತಿ’

Sirisuddi Kannada
1 Min Read

ಹರಪನಹಳ್ಳಿ : ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸನಾಳು ಗ್ರಾಮದ ಉಪನ್ಯಾಸಕ ಎಚ್.ಶಿವಾನಂದ ಅವರಿಗೆ ಬಸವ ಚೇತನ ಪ್ರಶಸ್ತಿ ಲಭಿಸಿದ್ದು, ಭಾನುವಾರ ಹಾವೇರಿಯಲ್ಲಿ ಜರುಗಿದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪಿಯು ಕಾಲೇಜಿನಲ್ಲಿ ಭೂಗೋಳ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಎಚ್.ಶಿವಾನಂದ ಅವರೂ ಹಲವು ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆ ಪರಿಗಣಿಸಿ  ಚಿತ್ರದುರ್ಗ ಕರುನಾಡು ಕಲ್ಪವೃಕ್ಷ ಪ್ರಕಾಶನ ಸಂಸ್ಥೆ, ಕರುನಾಡು ಕಲ್ಪವೃಕ್ಷ  ಪೌಂಡೇಶನ್( ರಿ), ಕರ್ನಾಟಕ ಮತ್ತು ಸಾಹಿತ್ಯ ವೇದಿಕೆ ವತಿಯಿಂದ ಚಿತ್ರದುರ್ಗದಲ್ಲಿ ಜರುಗಿದ ಸಾಹಿತ್ಯ ಕಲ್ಪವೃಕ್ಷೋತ್ಸವ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು.

ಶಿವಾನಂದ ಅವರು ವೃತ್ತಿ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ನಿಸ್ವಾರ್ಥವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ಸೇವೆ ಗುರುತಿಸಿರುವ ಅನೇಕ ಸಂಸ್ಥೆಗಳು ಇವರಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿರುವುದು ಗಮನಾರ್ಹ. ಹಾವೇರಿಯಲ್ಲಿ ಜರುಗಿದ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುರೇಶ್ ಮಲ್ಲಾಡದ ಉದ್ಘಾಟಿಸಿದರು. ಸವಣೂರು ಹಿರಿಯ ಸಾಹಿತಿ ಡಾ.ಎಚ್.ಐ. ತಿಮ್ಮಾಪುರ ಸಮ್ಮೇಳನದ ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು.   ಕರುನಾಡು ಕಲ್ಪವೃಕ್ಷ ಫೌಂಡೇಶನ್ ರಾಜ್ಯಾಧ್ಯಕ್ಷ ರೇಖಾ ಶಿವರಾಮ್ ಭಟ್ ಆಶಯ ನುಡಿ ನುಡಿದರು.

ಕರುನಾಡು ಕಲ್ಪವೃಕ್ಷ ಫೌಂಡೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಗೌಡರ ಪ್ರಸ್ತಾವಿಕ ಮಾತನಾಡಿದರು.   ಸಾಹಿತಿಗಳಾದ ಸತೀಶ್ ಕುಲಕರ್ಣಿ, ಹಾವೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಲಿಂಗಯ್ಯ ಹಿರೇಮಠ, ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ಜಿಲ್ಲಾ ಅಧ್ಯಕ್ಷ ಗಿರೀಶ್ ಬಾರ್ಕಿ, ಶಿಕ್ಷಕ ಕೆ.ರಾಜಶೇಖರ್, ಲಿಂಗರಾಜ್ ಸೊಟ್ಟಪ್ಪನವರ್, ಸುಧಾ ಆಚಾರ್, ಮಂಜುನಾಥ್ ಪಾಟೀಲ್, ಕಾಂತೇಶ್ ರೆಡ್ಡಿ ಗೋಡಿಯಾಳ ಇದ್ದರು.

Share This Article
Leave a Comment