Home ಸುದ್ದಿಗಳು ಬಿಸಿಯೂಟ ತಯಾರಕರ ಪ್ರತಿಭಟನೆ : ಒತ್ತಾಯ
ಸುದ್ದಿಗಳು

ಬಿಸಿಯೂಟ ತಯಾರಕರ ಪ್ರತಿಭಟನೆ : ಒತ್ತಾಯ

Share
BISIUTA,STAFF,PROTEST,HARAPANAHALLI
Share

ಹರಪನಹಳ್ಳಿ : ಬಿಸಿಯೂಟ ಕಾರ್ಯಕರ್ತೆಯರ ತಿಂಗಳ ಗೌರವಧನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಕಾರ್ಯಕರ್ತರು ಸೋಮವಾರ ತಾಲ್ಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾ ಮುಖಂಡರಾದ ಪುಷ್ಪಾ ಮಾತನಾಡಿ, 23 ವರ್ಷಗಳಿಂದ ಬಿಸಿಯೂಟ ತಯಾರಕರು ಗೌರವಧನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಶಾಲಾ ಮಕ್ಕಳಿಗೆ ಶುಚಿ, ರುಚಿಯಾದ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಈಗ ನಮ್ಮ ಗೌರವಧನ ರೂ.3600ಕ್ಕೆ ತಲುಪಿದೆ. ಇದರಿಂದ ನಮ್ಮ ಕುಟುಂಬ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಬೆಳಗಾವಿಯ ಖಾನಾಪುರದಲ್ಲಿ ನಡೆದಿದ್ದ ಸಮಾವೇಶದಲ್ಲಿ ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿ ಅವರು ಬಿಸಿಯೂಟ ಮತ್ತು ಅಂಗನವಾಡಿ ತಾಯಂದಿರ ಗೌರವಧನ ಹೆಚ್ಚಿಸಲಾಗುವುದು ಎಂದು 6ನೇ ಗ್ಯಾರಂಟಿ ಘೋಷಿಸಿದ್ದರು, ಆದರೆ ಅದು ಈವರೆಗೂ ಈಡೇರಿಲ್ಲ ಎಂದು ದೂರಿದರು.
ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ತಯಾರಕರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಉದ್ಯೋಗ ಭದ್ರತೆ ಒದಗಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ವಿಲೀನಗೊಳಿಸುವ ನಿರ್ಧಾರ ಕೈಬಿಡಬೇಕು. ಒಂದು ವೇಳೆ ಶಾಲೆ ಮುಚ್ಚಿದರೆ ಶಾಲೆಯ ಅಡುಗೆ ಕೆಲಸವನ್ನೆ ನಂಬಿರುವ ಸಿಬ್ಬಂದಿಗಳಿಗೆ ಅನ್ಯಾಯವಾಗುತ್ತದೆ. ಶೀಘ್ರ ಗೌರವಧನ ಹೆಚ್ಚಿಸುವ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲ್ಲೂಕು ಮುಖಂಡ ಬಳಿಗನೂರು ಕೊಟ್ರೇಶ್, ಪುಷ್ಪಾ, ವಿಶಾಲಮ್ಮ, ಶಿಲ್ಪಾ, ರುದ್ರಮ್ಮ, ಚೈತ್ರಾ, ಗುಡಿಹಳ್ಳಿ ಹಾಲೇಶ್, ಎಚ್.ಎಂ.ಸಂತೋಷ್, ಚೌಡಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.