ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.
ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು.
ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ, ವೆಂಕಟೇಶ್, ಅಬ್ದುಲ್ ರೆಹಮಾನ್, ಮೈದೂರು ರಾಮಪ್ಪ, ಹುಲಿಕಟ್ಟೆ ಚಂದ್ರಪ್ಪ, ವಸಂತಪ್ಪ, ಒ.ಮಹಾಂತೇಶ, ಗಣೇಶ್, ಚಿಕ್ಕೇರಿ ಬಸಪ್ಪ, ದೇವೇಂದ್ರಗೌಡ ಇದ್ದರು.
Leave a comment