Home ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು
Homeಅಪರಾಧ

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

Share
ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು
Share

ಅಪಘಾತವೆಂದು ನಂಬಿಸಲು ಯತ್ನಿಸಿದ ಇಬ್ಬರ ಬಂಧನ

ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಆಸ್ತಿ ಪಾಲಿಗಾಗಿ ಹೆತ್ತ ಅಣ್ಣನನ್ನೇ ತಮ್ಮ ಮತ್ತು ಆತನ ಸ್ನೇಹಿತ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಇದೊಂದು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಬಣ್ಣ ಬಯಲಾಗಿದ್ದು, ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಯುವಕನನ್ನು ಹರಪನಹಳ್ಳಿ ತಾಲೂಕಿನ ಹಗರಿಶೀರನಹಳ್ಳಿ  ಗ್ರಾಮದ ಮರುಳಸಿದ್ದೇಶ (26) ಎಂದು ಗುರುತಿಸಲಾಗಿದೆ. ಈತನ ಸ್ವಂತ ತಮ್ಮ ಹಗರಿಶೀರನಹಳ್ಳಿಯ ಪತ್ರಿಗೌಡ (24) ಹಾಗೂ ಈತನ ಸ್ನೇಹಿತ ಕಡಬಗೆರೆ ಗ್ರಾಮದ ಉತ್ತಂಗಿ ನಾರಪ್ಪ (29) ಕೊಲೆಗೈದ ಆರೋಪಿಗಳು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:
ಮೃತನ ತಾಯಿ, ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ಅವರು ನೀಡಿದ ದೂರಿನನ್ವಯ, ಹಿರಿಯ ಮಗ ಮರುಳಸಿದ್ದೇಶ ಮನೆಯ ಜವಾಬ್ದಾರಿ, ಜಮೀನು ಹಾಗೂ ಟ್ರ್ಯಾಕ್ಟರ್ ನೋಡಿಕೊಳ್ಳುತ್ತಿದ್ದ. ಆದರೆ ಕಿರಿಯ ಮಗ, ಆರೋಪಿ ಪತ್ರಿಗೌಡ ತನಗೆ ಆಸ್ತಿಯಲ್ಲಿ ಪಾಲು ಬೇಕು, ಹಂಚಿಕೊಡಿ ಎಂದು ತಾಯಿ ಮತ್ತು ಅಣ್ಣನೊಂದಿಗೆ ಜಗಳವಾಡುತ್ತಿದ್ದ.

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

ಕೊಲೆಯ ಸಂಚು ಮತ್ತು ಕೃತ್ಯ:
ಮಾರ್ಚ್ 13ರಂದು ಮಧ್ಯಾಹ್ನ ಇದೇ ವಿಚಾರವಾಗಿ ಜಗಳ ತೆಗೆದಿದ್ದ ಆರೋಪಿ ಪತ್ರಿಗೌಡ, “ಪಾಲು ಕೊಡದಿದ್ದರೆ ನಾನು ದುಡಿಯಲು ಬೆಂಗಳೂರಿಗೆ ಹೋಗುತ್ತೇನೆ” ಎಂದು ಹೇಳಿ ಹೋಗಿದ್ದ. ಮೃತ ಮರುಳಸಿದ್ದೇಶನು ಉತ್ತಂಗಿ ನಾರಪನನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡು ಮನೆ ಬಿಟ್ಟು ಹೋಗಿದ್ದ ಸಹೋದರ ಪತ್ರಿಗೌಡನನ್ನು ಹುಡುಕಾಡಲು ತೆರಳಿದ್ದ. ತಡರಾತ್ರಿ 1 ಗಂಟೆಗೆ ಹಿರೆಮೇಗಳಗೆರೆ ಸಮೀಪದ ಹೊಸಹಳ್ಳಿ ಕ್ರಾಸ್ ಬಳಿ ಬೈಕ್‍ ಅಪಘಾತವಾಗಿ ಮೃತಪಟ್ಟಿದ್ದಾರೆ ಎಂದು ದೂರದ ಸಂಬಂಧಿ ಜಯಪ್ಪ ಅವರು ಶಾಂತಮ್ಮ ಅವರಿಗೆ ತಿಳಿಸಿದ್ದಾರೆ. ಪಿರ್ಯಾದಿ ಅವರು ಕೂಡಲೇ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಿದ್ದ ಶವ ನೋಡಲಾಗಿ, ಮರುಳಸಿದ್ದೇಶನ ತಲೆ, ಎದೆ, ಮತ್ತು ಮುಖದ ಮೇಲೆ ಬಲವಾದ ಪೆಟ್ಟುಗಳಾಗಿದ್ದವು. ಆದರೆ, ಇದು ವಾಹನ ಅಪಘಾತದಿಂದ ಆದ ಗಾಯಗಳಂತೆ ಇರಲಿಲ್ಲ. ಬೈಕ್‌ನಲ್ಲಿದ್ದ ತಮ್ಮ ಮತ್ತು ಆತನ ಸ್ನೇಹಿತನಿಗೆ ಯಾವುದೇ ಸಣ್ಣ ಗಾಯವೂ ಆಗಿರಲಿಲ್ಲ. ಆಸ್ತಿ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನುವ ಅನುಮಾನದಿಂದ  ತಾಯಿ ಶಾಂತಮ್ಮ ಅರಸೀಕೆರೆ ಪೊಲೀಸರಿಗೆ ದೂರು ನೀಡಿದರು. ದೂರು ಆಧರಿಸಿ ವಿಚಾರಣೆ ನಡೆಸಿದಾಗ ಸತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.