ಕಲೆ

15 Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಷರೀಪ್ ಮಕರಬ್ಬಿ, ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಗೌರವಾಧ್ಯಕ್ಷ ಎನ್‍.ಟಿ.ಸೋಮಪ್ಪ, ಜಿಲ್ಲಾ...

RAVICHANDRAN
Homeಕಲೆಮನರಂಜನೆ

 ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಾಯಭಾರಿ ವರ್ಣರಂಜಿತ, ವರ್ಣಾತಿತ ಕಲಾವಿದ

ದಾವಣಗೆರೆ: ಮನುಷ್ಯನಿಗೆ ನೆಮ್ಮದಿ ಕೊಡುವುದು ತಂದೆಯ ಹೆಗಲು, ನೆಮ್ಮದಿಯನ್ನು ಹೆಚ್ಚು ಮಾಡುವುದು ತಾಯಿಯ ಮಡಿಲು.  ರವಿಚಂದ್ರನ್ ಗೆ ತಂದೆ ತಾಯಿ  ಹೆಗಲಾಗಿದ್ದಾರೆ. ಅವರ ಜನ್ಮದಿನಾಚಣೆಯನ್ನು  ಸಂಗೀತ ಸಾಮ್ರಾಟ್ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ...

chigateri-folk-artists-awareness-meeting
ಕಲೆಮನರಂಜನೆ

ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ

ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ ಪುಸ್ತಕಕ್ಕೆ ಸೀಮಿತವಲ್ಲ; ಅವು ಕಲಾವಿದರ ಬದುಕಿನ ಅವಿಭಾಜ್ಯ ಅಂಗಗಳಾಗಿವೆ’ ಎಂದು ಅಖಿಲ ಭಾರತ ಕಿಸಾನ್...

ಹರಪನಹಳ್ಳಿ: ಅರಸೀಕೆರೆಯಲ್ಲಿ  'ಸಂಗ್ಯಾ ಬಾಳ್ಯ' ನಾಟಕ 
ಕಲೆಮನರಂಜನೆ

ಹರಪನಹಳ್ಳಿ: ಅರಸೀಕೆರೆಯಲ್ಲಿ  ‘ಸಂಗ್ಯಾ ಬಾಳ್ಯ’ ನಾಟಕ 

ಹರಪನಹಳ್ಳಿ: ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅಬ್ಬರದಿಂದಾಗಿ ಗ್ರಾಮೀಣ ಭಾಗದ ನಾಟಕ ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅರಸೀಕೆರೆ ಗ್ರಾಮದ...

ಕಲೆಸುದ್ದಿಗಳು

ಹಂಪಿ ಉತ್ಸವ : ಶ್ರೀ ವಿರೂಪಾಕ್ಷ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಸಾಂಸ್ಕೃತಿಕ ರಸಮಂಜರಿ

ವಿಜಯನಗರ: ಹಂಪಿ ಉತ್ಸವದ ಎರಡನೆಯ ದಿನವಾದ ಶನಿವಾರ ಶ್ರೀ ವಿರೂಪಾಕ್ಷ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳಿಂದ ನಾಡಿನ ಸಂಸ್ಕೃತಿ, ಸೊಗಡು, ಜನಪದ ಕಲೋಕ್ತಿ ಒಳಗೊಂಡತೆ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ರಸಮಂಜರಿ ಅನಾವರಣಗೊಂಡಿತು....

ಕಲೆಸುದ್ದಿಗಳು

ಹಂಪಿ ಉತ್ಸವದ ಯುವಕವಿಗೋಷ್ಠಿಯಲ್ಲಿ ಹಿರಿಯ ಸಾಹಿತಿ ಎ.ಎಂ.ಮದರಿ ಸಲಹೆ

ವಿಜಯನಗರ: ನವಕಾಲದ ಯುವ ಕವಿಗಳು ಜನಸಾಮಾನ್ಯರ ಬದುಕು ಬವಣೆಗಳಿಗೆ ಧ್ವನಿಯಾಗಬೇಕು. ಸಾಹಿತ್ಯ ಪರಂಪರೆಯಲ್ಲಿ ದಾಖಲಾಗದ ಬೀದಿಯಲ್ಲಿರುವ ಕೂಲಿ ಕಾರ್ಮಿಕರ ಜೀವನವನ್ನು ಕವಿತೆಗಳಲ್ಲಿ ವ್ಯಕ್ತಪಡಿಸಿ ಅವರ ಕಥೆಗಳನ್ನು ಹೇಳಬೇಕು ಎಂದು ಹಿರಿಯ ಸಾಹಿತಿ...

ಕಲೆಸುದ್ದಿಗಳು

ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿ

ವಿಜಯನಗರ: ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು. ಶಾಸಕ  ಹೆಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ...

ಕಲೆಸುದ್ದಿಗಳು

ಹಂಪಿ ಉತ್ಸವ-2026ಕ್ಕೆ ವಿದ್ಯುಕ್ತ ಚಾಲನೆ

ಪ್ರತಿ ವರ್ಷ ನವೆಂಬರ್‌ನಲ್ಲೇ ಹಂಪಿ ಉತ್ಸವ ಆಚರಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ವಿಜಯನಗರ(ಹಂಪಿ) : ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಆಶಯದಂತೆ ಪ್ರಸಕ್ತ ವರ್ಷದಿಂದಲೇ ಹಂಪಿ ಉತ್ಸವವನ್ನು ಇನ್ನು ಮುಂದೆ ಪ್ರತಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.