Home ಸುದ್ದಿಗಳು ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
ಸುದ್ದಿಗಳು

ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ

Share
ಕೆರೆಗುಡಿಹಳ್ಳಿ ಮಾದಿಹಳ್ಳಿ ರಸ್ತೆ ದುರಸ್ಥಿಗೆ ಆಗ್ರಹ
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳು  ಹೊಸಕೋಟೆ, ಮಾದಿಹಳ್ಳಿ ಮಾರ್ಗದ ರಸ್ತೆ ಅಭಿವೃದ್ದಿಪಡಿಸಬೇಕು ಮತ್ತು ಈ ಮಾರ್ಗದಲ್ಲಿ  ಸಾರಿಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ, ಅಖಿಲ ಭಾರತ ವಿಧ್ಯಾರ್ಥಿ ‌ಫೆಡರೇಷನ್ ಸಹಯೋಗದಲ್ಲಿ  ಕೆರೆಗುಡಿಹಳ್ಳಿ ಹಾಗೂ ಚಿಕ್ಕ‌ಕಬ್ಬಳ್ಳಿ ನಡುವೆ ಗುಂಡಿಬಿದ್ದ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಮಾತನಾಡಿ, ಕೆರೆಗುಡಿಹಳ್ಳಿಯಿಂದ ಗಡಿ ಗುಡಾಳುವರೆಗೆ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು‌.
ರೈತ ಮುಖಂಡ ಬೂದಿಹಾಳು ಸಿದ್ದೇಶ್ ಮಾತನಾಡಿ, ಶಾಸಕರ ಗಮನಕ್ಕೆ ತಂದರೂ ಸಾರಿಗೆ ಬಸ್ ಸಮಸ್ಯೆ, ರಸ್ತೆ ಅಬಿವೃದ್ದಿ ಆಗುತ್ತಿಲ್ಲ ಎಂದು ದೂರಿದರು. ದಲಿತ ಮುಖಂಡ ಕಬ್ಬಳ್ಳಿ ಮೈಲಪ್ಪ , ನಿವೃತ್ತ ಶಿಕ್ಷಕ ಜಾತಪ್ಪ, ಮಾದಿಹಳ್ಳಿ ಬೊಮ್ಮಲಿಂಗಪ್ಪ,  ಡಿ.ಹೆಚ್.ಅರುಣ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ನಾಗಪ್ಪ ಮಾತನಾಡಿದರು. ಎಇಇ  ಕುಬೇಂದ್ರ ನಾಯ್ಕ್, ಕೆ.ಎಸ್.ಆರ್.ಟಿ.ಸಿ. ಘಟಕ ವ್ಯವಸ್ಥಾಪಕಿ ಮಂಜುಳಾ ಮನವಿ ಸ್ವೀಕರಿಸಿದರು.
ಉಪ ತಹಶೀಲ್ದಾರ್ ಚಂದ್ರಮೋಹನ್, ಪಿಡಿಒ ಎಚ್.ಎಸ್.ಹೇಮಂತ್ ಕುಮಾರ್, ಶ್ರೀನಿವಾಸ್, ಪುಣಭಘಟ್ಟ ಮಂಜು,ಹಗರಿ ಗುಡಿಹಳ್ಳಿ ಶಿವರಾಮ್,ಪ್ರದೀಪ್, ಕೆರೆಗುಡಿಹಳ್ಳಿ ಶಿವಣ್ಣ ಇದ್ದರು.‌

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.