Home ಸುದ್ದಿಗಳು ಶಿಕ್ಷಣ ಸಂಯೋಜಕರಿಗೆ ನೂರಾರು ಶಿಕ್ಷಕರಿಂದ ಹೃದಯಸ್ಪರ್ಶಿ ಸ್ವಾಗತ
ಸುದ್ದಿಗಳು

ಶಿಕ್ಷಣ ಸಂಯೋಜಕರಿಗೆ ನೂರಾರು ಶಿಕ್ಷಕರಿಂದ ಹೃದಯಸ್ಪರ್ಶಿ ಸ್ವಾಗತ

Share
Harapanagalli
Share

ಸಿರಿಸುದ್ದಿ.ಕಾಂ, ಹರಪನಹಳ್ಳಿ : ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಹೊಸದಾಗಿ ಮೂರು ಜನ ಶಿಕ್ಷಕರು ಶಿಕ್ಷಣ ಸಂಯೋಜಕರು (ಇಸಿಒ)ಗಳಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.

ಹಿಂದಿನ ಶಿಕ್ಷಣ ಸಂಯೋಜಕರುಗಳ ಅವಧಿ ಮುಕ್ತಾಯದ ಹಿನ್ನೆಲೆಯಲ್ಲಿ ಕೆ.ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ವೀರೇಶ್, ಹರಪನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಲತಾ ರಾಥೋಡ್,ಪಂಪಾನಾಯ್ಕ ಅವರು ಅಧಿಕಾರ ವಹಿಸಿಕೊಂಡರು. ನೂತನ ಇಸಿಒಗಳಿಗೆ ಶಾಲು ಹೊದಿಸಿ, ಪುಷ್ಪಗುಚ್ಚ ಕೊಡುವ ಮೂಲಕ ಹೃದಯಸ್ಪರ್ಶಿಯಾಗಿ ಸ್ವಾಗತಿಸಲಾಯಿತು. ವರ್ಗಾವಣೆಗೊಂಡ ಶಿಕ್ಷಕ ಸಂಯೋಜಕರಾದ ಕಬೀರ್ ನಾಯ್ಕ, ಘನೀಫ್ ಸಾಬ್ ಅವರನ್ನು ಬೀಳ್ಕೊಡಲಾಯಿತು.

ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ಬಿ.ಆರ್.ಸಿ. ಹೊನ್ನತ್ತೆಪ್ಪ, ವ್ಯವಸ್ಥಾಪಕ ದೇವೋಜಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಪ್ರೌಢಶಾಲೆ ಶಿಕ್ಷಕರಾದ ಎನ್.ಜಿ.ಮನೋಹರ, ರಾಜ್ಯ ಪರಿಷತ್ ಸದಸ್ಯರಾದ ಎಂ.ಶರೀಫ್, ಮಂಜುನಾಥ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಕೆ.ಅಂಜಿನಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ತಾಲ್ಲೂಕು ಗುರುಮೂರ್ತಿ, ಶಿಕ್ಷಕರ ಕಲಾ ಸಂಘದ ಅಧ್ಯಕ್ಷ ಕರಿಬಸಪ್ಪ, ಪಿ.ಸುಬ್ಬಣ್ಣ, ಡಿ.ಶಶಿಕಲಾ, ಪೂಜಾರ ಮಂಜುನಾಥ, ಹುಸೇನ್ ಪೀರ, ಕಬೀರ್ ನಾಯ್ಕ, ಕೊಟ್ರೇಶ್, ಗಿರಿರಾಜ, ಜಯಮಾಲತೇಶ್, ಸಾವಿತ್ರಿಬಾಪುಲೆ ಸಂಘದ ಟಿ.ಎಚ್.ಎಂ.ಲತಾ, ವೀರಮ್ಮ, ಸಂಗಯ್ಯ, ಬಿಆರ್ಪಿ ವಾಗೀಶ್, ಜಮಾಲುದ್ದೀನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಶಿವಯೋಗಿ, ಪಿ.ರುದ್ರಚಾರಿ, ರುದ್ರಪ್ಪ, ದಯಾನಂದ, ಶಂಕರಮೂರ್ತಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.