Home ಸುದ್ದಿಗಳು ಹರಪನಹಳ್ಳಿಯಲ್ಲಿ ಇಎಸ್ಐ ಆಸ್ಪತ್ರೆಗೆ ಕಾರ್ಮಿಕರ ಒತ್ತಾಯ
ಸುದ್ದಿಗಳು

ಹರಪನಹಳ್ಳಿಯಲ್ಲಿ ಇಎಸ್ಐ ಆಸ್ಪತ್ರೆಗೆ ಕಾರ್ಮಿಕರ ಒತ್ತಾಯ

Share
esi,hospital, labour, protest
Share

ಹರಪನಹಳ್ಳಿ : ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ವಿಮಾ (ಇಎಸ್‍ಐ) ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್‍ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್‍ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ಆವರಣದಲ್ಲಿ ಪ್ರತಿಭಟಿಸಿದ ಕಾರ್ಮಿಕರು ಇಎಸ್‍ಐ ಆಸ್ಪತ್ರೆ ಆರಂಭಿಸಲು ಆಗ್ರಹಿಸಿ, ಮನವಿ ಸಲ್ಲಿಸಿದರು. ‘ತಾಲ್ಲೂಕಿನಲ್ಲಿ 30 ಸಾವಿರ ಕಾರ್ಮಿಕರ ನೊಂದಣಿಯಾಗಿದೆ. ಅಪ‍ಘಾತ, ಕ್ಷಯ, ದಮ್ಮು, ಕೀಲುಮೂಳೆ ನೋವುಗಳಿಗೆ ಚಿಕಿತ್ಸೆ ಪಡೆಯಲು ದೂರದ ದಾವಣಗೆರೆ, ಬಳ್ಳಾರಿಗೆ ತೆರಳುವ ಅನಿವಾರ್ಯತೆ ಇದೆ. ನಗರದಲ್ಲಿ ಇಎಸ್‍ಐ, ಮೆಡಿಕಲ್ ಸೌಲಭ್ಯವಿಲ್ಲದ ಪರಿಣಾಮ ಕಾರ್ಮಿಕರು ಪರದಾಡುವಂತಾಗಿದೆ. ಕೂಡಲೇ ಇಎಸ್‍ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಸಂದೇರ ಪರಶುರಾಮ್, ಜಿಲ್ಲಾ ಕಾರ್ಯದರ್ಶಿ ಗುಳೇದಹಟ್ಟಿ ಸಂತೋಷ, ಹುಲಿಕಟ್ಟೆ ಮೈಲಪ್ಪ, ಕಲೀಂ, ಮಹಮ್ಮದ್ ರಫೀಕ್, ಎಸ್.ರಾಜು, ಬಿ.ಎಸ್.ಪ್ರಕಾಶ್, ಮಹಮ್ಮದ್ ಗೌಸ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.