ವಿಜಯನಗರ (ಹೊಸಪೇಟೆ) : ವಿದ್ಯಾರ್ಥಿಗಳಿಗೆ ಕಾನೂನು ಬಾಹಿರವಾಗಿ ನಕಲಿ ಬಸ್ ಪಾಸ್ಗಳನ್ನು ಸೃಷ್ಟಿಸಿ ವಿತರಿಸುವ ಮೂಲಕ ಸಾರಿಗೆ ನಿಗಮಕ್ಕೆ ವಂಚಿಸುತ್ತಿದ್ದ ಖಾಸಗಿ ಸೈಬರ್ ಕೇಂದ್ರದ ಅಂಗಡಿಯ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಹಗರಿಬೊಮ್ಮನಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ರಸ್ತೆಯಲ್ಲಿ ಸೈಬರ್ ಕೇಂದ್ರದಲ್ಲಿ ಕಾನೂನು ಬಾಹಿರವಾಗಿ ವಿಶ್ವ ಎಂಬ ವ್ಯಕ್ತಿ ವಿದ್ಯಾರ್ಥಿಗಳಿಂದ ರೂ. 200 ಪಡೆದು ನಕಲಿ ಬಸ್ ಪಾಸ್ಗಳನ್ನು ವಿತರಿಸಿರುವುದು ಎಂದು ತಿಳಿದುಬಂದಿದೆ. ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿತರಿಸುವ ಮೂಲಕ, ಸರ್ಕಾರದ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ನಿಗಮಕ್ಕೆ ಹಾಗೂ ಸರ್ಕಾರಕ್ಕೆ ಆರ್ಥಿಕ ವಂಚನೆ ಎಸಗಿರುವ ಕಾರಣ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಆದ್ದರಿಂದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಅಧಿಕೃತ ವಿದ್ಯಾರ್ಥಿ ಬಸ್ ಪಾಸ್ಗಳನ್ನುಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬೇಕು. ಇತರೆ ಯಾವುದೇ ಖಾಸಗಿ ಕೇಂದ್ರಗಳಲ್ಲಿ ಪಾಸ್ ಪಡೆದರೆ ಅದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment