Home ರೈತರು ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ. ಮಂಜುನಾಥ್ ಬಾನುವಳ್ಳಿ ಕರೆ
Homeಕೃಷಿ

ರೈತರು ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ. ಮಂಜುನಾಥ್ ಬಾನುವಳ್ಳಿ ಕರೆ

Share
ರೈತರು ಸಾವಯವ ಗೊಬ್ಬರ ಬಳಕೆಗೆ ಮುಂದಾಗಿ: ಡಾ. ಮಂಜುನಾಥ್ ಬಾನುವಳ್ಳಿ ಕರೆ
Share

ಹರಪನಹಳ್ಳಿ: ರೈತರು ಬೆಳೆಗಳನ್ನು ಬೆಳೆಯುವ ಮೊದಲು ಮಣ್ಣು ಹಾಗೂ ನೀರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು. ಮಣ್ಣು ಫಲವತ್ತಾಗಿದ್ದರೆ ಮಾತ್ರ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದು ಹಡಗಲಿಯ ಕೃಷಿ ವಿಸ್ತರಣ ಶಿಕ್ಷಣ ಕೇಂದ್ರದ ಡಾ. ಮಂಜುನಾಥ್ ಬಾನುವಳ್ಳಿ ತಿಳಿಸಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮದ ಕೃಷಿ ಕೇಂದ್ರದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಮಣ್ಣು ಆರೋಗ್ಯ ಅಭಿಯಾನ’ದಡಿ ರೈತರಿಗೆ ತರಬೇತಿ ಹಾಗೂ ರಾಗಿ ಬೆಳೆಯುವ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾವಯವ ಕೃಷಿಗೆ ಒತ್ತು ನೀಡಿ

“ಒಂದೇ ಬೆಳೆಯನ್ನು ಪದೇ ಪದೇ ಬೆಳೆಯುವುದರಿಂದ ಮಣ್ಣಿನ ಸವಕಳಿ ಉಂಟಾಗುತ್ತದೆ. ಆದ್ದರಿಂದ ರೈತರು ವೈವಿಧ್ಯಮಯ ಬೆಳೆಗಳನ್ನು ಬೆಳೆಯಬೇಕು. ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಿಂದ ಮಣ್ಣಿನ ಗುಣಮಟ್ಟ ಹಾಳಾಗುವುದಲ್ಲದೆ ಅನೇಕ ರೋಗಗಳು ಹರಡುತ್ತವೆ. ಹೀಗಾಗಿ ರೈತರು ರಾಸಾಯನಿಕ ಗೊಬ್ಬರಕ್ಕೆ ಮಾರು ಹೋಗದೆ ಹೆಚ್ಚಾಗಿ ಕೊಟ್ಟಿಗೆ ಗೊಬ್ಬರ ಹಾಗೂ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು,” ಎಂದು ಅವರು ಸಲಹೆ ನೀಡಿದರು.

ಆರೋಗ್ಯಕ್ಕೆ ರಾಗಿ ಶ್ರೇಷ್ಠ: ವಿ.ಸಿ. ಉಮೇಶ್

ಸಹಾಯಕ ಕೃಷಿ ನಿರ್ದೇಶಕ ವಿ.ಸಿ. ಉಮೇಶ್ ಮಾತನಾಡಿ, “ಅಕ್ಕಿಗಿಂತ ರಾಗಿ ಶ್ರೇಷ್ಠವಾದುದು. ರಾಗಿಯಲ್ಲಿ ಕ್ಯಾಲ್ಸಿಯಂ, ಪ್ರೊಟೀನ್ ಹಾಗೂ ನಾರಿನಂಶ ಹೆಚ್ಚಾಗಿರುವುದರಿಂದ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವವರಿಗೆ ಇದು ಅತ್ಯುತ್ತಮ ಆಹಾರ. ಅರಸೀಕೆರೆ ಹೋಬಳಿಯಲ್ಲಿ ಅತಿ ಹೆಚ್ಚು ರೈತರು ರಾಗಿ ಬೆಳೆಯುತ್ತಿರುವುದು ಸಂತಸದ ವಿಷಯ. ಸರ್ಕಾರ ಕೂಡ ರಾಗಿಗೆ ಬೆಂಬಲ ಬೆಲೆ ಘೋಷಿಸಿದೆ,” ಎಂದರು.

ಅರಸೀಕೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಆಗ್ರಹ

ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಮಾತನಾಡಿ, “ಈ ಭಾಗದಲ್ಲಿ ರಾಗಿ ಬೆಳೆಗಾರರು ಹೆಚ್ಚಿರುವುದರಿಂದ ಅರಸೀಕೆರೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರೆಯಬೇಕು. ಮಕ್ಕಳಿಗೆ ರಾಗಿ ಮಾಲ್ಟ್ ನೀಡುತ್ತಿರುವುದು ಒಳ್ಳೆಯ ಕ್ರಮ. ರೈತರು ರಾಗಿಯನ್ನು ವೈಜ್ಞಾನಿಕ ಬೆಲೆಗೆ ಮಾರಾಟ ಮಾಡಿ ಆರ್ಥಿಕ ಸಬಲರಾಗಬೇಕು,” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ಹೊಸಕೋಟೆ ಹನುಮಂತಪ್ಪ, ಹೊನ್ನೂರು ಹಾಲಪ್ಪ, ಪರುಸಪ್ಪ, ಸೋಮಲಿಂಗಪ್ಪ, ಎ.ಬಿ. ಮಲ್ಲಿಕಾರ್ಜುನ್ ಗೌಡ, ಎ.ಬಿ. ನಾಗರಾಜ್, ಕೃಷಿ ಅಧಿಕಾರಿಗಳಾದ ಹೆಚ್.ಎಲ್. ಸಂಗಪ್ಪ, ಷಣ್ಮುಖ್ ನಾಯ್ಕ್ ಹಾಗೂ ಇಲಾಖೆಯ ಸಿಬ್ಬಂದಿಗಳು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.