ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಜುಲೈ 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಅನಂತಶನಯನಗುಡಿ ರಾಯಣ್ಣ ಕಾಲೋನಿ ಹತ್ತಿರ ಶಿವಶರಣ ಹಡಪದ ಅಪ್ಪಣ್ಣನವರ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಪಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಪ್ರಕೃತಿ ವಿಕೋಪಗಳ ಮೇಲುಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್ ಘನ ಉಪಸ್ಥಿತಿ ವಹಿಸುವರು. ಶಾಸಕರು ಹೆಚ್.ಆರ್. ಗವಿಯಪ್ಪ
ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಬಳ್ಳಾರಿ ಸಂಸದರಾದ ಈ.ತುಕಾರಾಮ್, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣ ನಾಯಕ್, ಹರಪನಹಳ್ಳಿ ಶಾಸಕಿಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ. ಸತೀಶ್, ನಗರಸಭೆ ಅಧ್ಯಕ್ಷರು ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಷಾ ಭಾಗವಹಿಸುವರು. ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾದ್ಯಾಪಕ ಡಾ. ಟಿ.ಹೆಚ್.ಬಸವರಾಜ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಸಿದ್ದಲಿಂಗೇಶ ರಂಗಣ್ಣವರ ತಿಳಿಸಿದ್ದಾರೆ.
Leave a comment