Home ಹಲವಾಗಲು ಠಾಣೆಗೆ ವಿದ್ಯಾರ್ಥಿಗಳು ಭೇಟಿ :
Homeಶಿಕ್ಷಣ

ಹಲವಾಗಲು ಠಾಣೆಗೆ ವಿದ್ಯಾರ್ಥಿಗಳು ಭೇಟಿ :

Share
Share

ಹರಪನಹಳ್ಳಿ : ತಾಲ್ಲೂಕಿನ ಹಲುವಾಗಲು ಗ್ರಾಮದ ಮಾರುತಿ ಪಬ್ಲಿಕ್ ಶಾಲೆಯ ಮಕ್ಕಳು ಸಾರಿಗೆ ಬಸ್ ನಲ್ಲಿ ಠಾಣೆ ಆವರಣ ಪ್ರವೇಶಿಸಿದರು. ಆಗಮಿಸಿದ ವಿದ್ಯಾರ್ಥಿಗಳಿಗೆ ಪಿಎಸ್ಐ ಕಿರಣ್ ಕುಮಾರ ಮಾತನಾಡಿ, ಸಂಪೂರ್ಣ ಠಾಣೆಯನ್ನು ಪರಿಚಯಿಸಿಕೊಟ್ಟರು. ಠಾಣೆಯಲ್ಲಿ ಸೆಂಟ್ರಿ ಪೊಲೀಸ್, ಬಾಗಿಲು, ಪೊಲೀಸ್ ಸಬ್ ಇನ್ಸಪೆಕ್ಟರ್ ಕರ್ತವ್ಯಗಳು, ತನಿಖಾಧಿಕಾರಿ ಕೋಣೆ, ದಾಸ್ತಾನು ಕೊಠಡಿ, ಪೊಲೀಸರ ವೆಪನ್ ಕೋಣೆ, ಜೈಲು, ವಾಕಿಟಾಕಿ, ರೈಫಲ್, ಗನ್ ಗಳನ್ನು ಪ್ರದರ್ಶಿಸಿ ಅವುಗಳ ಬಗ್ಗೆ ಮಾಹಿತಿ ಕೊಟ್ಟರು.

ಪೊಲೀಸ್ ಇಲಾಖೆ ತೆರೆದಮನೆ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಠಾಣೆಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಇದರಿಂದ ಮಕ್ಕಳು, ಸಾರ್ವಜನಿಕರು ಪೊಲೀಸ್ ಸ್ನೇಹಿಯಾಗಿಸಲಾಗುತ್ತಿದೆ ಎಂದರು. ಪ್ರಥಮ ವರ್ತಮಾನ ವರದಿ, ವಿವಿಧ ತನಿಖಾ ವರದಿಗಳ ಬಗ್ಗೆ ಮಾಹಿತಿ ನೀಡಿದರು. ಠಾಣೆಯನ್ನು ವೀಕ್ಷಿಸಿದ ವಿದ್ಯಾರ್ಥಿಗಳಿಗೆ ಚಾಕುಲೆಟ್ ವಿತರಿಸಲಾಯಿತು. ಸಿಬ್ಬಂದಿಗಳಾದ ಮಂಜಪ್ಪ, ನಾಗರಾಜ್ ಚಿಂಚಲಿ, ಜಮಾಲ್ ಸಾಬ್, ಶಿವಕುಮಾರ ಹಾಗೂ ಶಾಲಾ ಶಿಕ್ಷಕರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.