Home ಹಂಪಿ ಆಕಾಶದಲ್ಲಿ ಅದ್ಭುತ ಲೋಕ : ಡ್ರೋನ್ ಶೋ ಮೂಲಕ  ವಿಜಯನಗರ ವೈಭವ
Homeಸುದ್ದಿಗಳು

ಹಂಪಿ ಆಕಾಶದಲ್ಲಿ ಅದ್ಭುತ ಲೋಕ : ಡ್ರೋನ್ ಶೋ ಮೂಲಕ  ವಿಜಯನಗರ ವೈಭವ

Share
Share

ವಿಜಯನಗರ (ಹಂಪಿ)  : 
ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅತ್ಯಾಧುನಿಕ ಡ್ರೋನ್ ಶೋ, ವಿಜಯನಗರದ ಗತವೈಭವವನ್ನು ಬಾನಂಗಳದಲ್ಲಿ ಅನಾವರಣಗೊಳಿಸಿತು. ಆಧುನಿಕ ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಪರಂಪರೆಯ ಈ ಅಪೂರ್ವ ಸಂಗಮವು ನೆರೆದಿದ್ದ ಸಹಸ್ರಾರು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.
ನೂರಾರು ಡ್ರೋನ್‌ಗಳು ಆಕಾಶದಲ್ಲಿ ಹಂಪಿಯ ಪ್ರಸಿದ್ಧ ಕಲ್ಲಿನ ರಥ, ಭವ್ಯವಾದ ವಿರೂಪಾಕ್ಷ ದೇವಾಲಯ ಮತ್ತು ರೌದ್ರಾವತಾರದಲ್ಲಿರುವ ಉಗ್ರ ನರಸಿಂಹನ ಮೂರ್ತಿಗಳನ್ನು ಕಲಾತ್ಮಕವಾಗಿ ಬಿಂಬಿಸಿದವು. ವಿಜಯನಗರ ಸಾಮ್ರಾಜ್ಯವನ್ನು ಜಗತ್ತಿಗೆ ಪರಿಚಯಿಸಿದ ಅಪ್ರತಿಮ ವೀರ, ಕನ್ನಡಿಗರ ಹೆಮ್ಮೆಯ ಸಾಮ್ರಾಟ ಶ್ರೀ ಕೃಷ್ಣದೇವರಾಯರ ಭಾವಚಿತ್ರವು ಆಕಾಶದಲ್ಲಿ ಮೂಡಿಬಂದಾಗ ಜನರಿಂದ ಹರ್ಷೋದ್ಗಾರ ವ್ಯಕ್ತವಾಯಿತು. ಇದರೊಂದಿಗೆ ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿರುವ ಹಂಪಿಯ ದರೋಜಿ ಕರಡಿ ಧಾಮ ಮತ್ತು ಬಡವಿ ಲಿಂಗದ ಚಿತ್ರಣಗಳು ಪ್ರದರ್ಶನದ ಮೆರುಗನ್ನು ಹೆಚ್ಚಿಸಿದವು.

               

ಪ್ರದರ್ಶನವು ಕೇವಲ ಇತಿಹಾಸಕ್ಕೆ ಸೀಮಿತವಾಗದೆ, ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಾದ ಶಕ್ತಿ ಮತ್ತು ಅನ್ನಭಾಗ್ಯ ಸೇರಿದಂತೆ ಪಂಚ ಯೋಜನೆಗಳ ಕುರಿತು ಮಾಹಿತಿಯನ್ನು ಸ್ಫುಟವಾಗಿ ಪ್ರದರ್ಶಿಸಿತು. ಕೊನೆಯಲ್ಲಿ ಬಡವರ ಮತ್ತು ಕಲಾವಿದರ ಆಶಾಕಿರಣವೆಂದು ಬಣ್ಣಿಸಲಾದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಭಾವಚಿತ್ರವನ್ನು ಡ್ರೋನ್ ಮೂಲಕ ಬಾನಂಗಳದಲ್ಲಿ ಚಿತ್ರಿಸಿ ಗೌರವ ಸಲ್ಲಿಸಲಾಯಿತು.

ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್, ಸಚಿವ ಶಿವರಾಜ ತಂಗಡಿ, ಬಿ.ಝಡ್.ಜಮೀರ್ ಅಹಮ್ಮದ್ ಖಾನ್, ಶಾಸಕ ಹೆಚ್.ಆರ್.ಗವಿಯಪ್ಪ, ನಟ ದಿವಂಗತ ಪುನೀತ್‌ರಾಜ್ ಕುಮಾರ್ ಚಿತ್ರಗಳು ಡ್ರೋನ್ ಸಂಯೋಜನೆಯಲ್ಲಿ ಮೂಡಿಬಂದವು. ಈ ವರ್ಣರಂಜಿತ ಡ್ರೋನ್ ಶೋ ಪ್ರದರ್ಶನವು ಹಂಪಿಯ ಸಾಂಸ್ಕೃತಿಕ ಹಿರಿಮೆಗೆ ಹೊಸ ಆಯಾಮವನ್ನು ನೀಡುವಲ್ಲಿ ಯಶಸ್ವಿಯಾಯಿತು. ಎ.ಐ.ಆರ್. ಪಿಕ್ಸಲ್ ಕಂಪನಿಯ ತಂತ್ರಜ್ಞರು ಡ್ರೋನ್‌ಗಳ ಸಂಯೋಜನೆಯ ನಿರ್ವಹಣೆ ಮಾಡಿದರು. ಉತ್ಸವ 3 ದಿನಗಳ ಕಾಲವೂ ಡ್ರೋನ್ ಷೋ ನಡೆಯಲಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.