Home ಕ್ರೀಡೆ ಹಂಪಿ ಉತ್ಸವ ಮಹಿಳಾ ಕುಸ್ತಿ ಪಂದ್ಯಾವಳಿ : ಮಹಿಳಾ ಕಂಠೀರವ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಧಿಕಾ ವಿಶ್ವನಾಥ ತೊಂಡಿಹಾಳ
ಕ್ರೀಡೆಸುದ್ದಿಗಳು

ಹಂಪಿ ಉತ್ಸವ ಮಹಿಳಾ ಕುಸ್ತಿ ಪಂದ್ಯಾವಳಿ : ಮಹಿಳಾ ಕಂಠೀರವ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಧಿಕಾ ವಿಶ್ವನಾಥ ತೊಂಡಿಹಾಳ

Share
Share

ವಿಜಯನಗರ :
ಹಂಪಿ ಉತ್ಸವ-2026 ಅಂಗವಾಗಿ ಜರುಗಿದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ 58 ಕೆ.ಜಿ. ಮೇಲ್ಪಟ್ಟ ವಿಭಾಗದಲ್ಲಿ ರಾಧಿಕಾ ವಿಶ್ವನಾಥ ತೊಂಡಿಹಾಳ ಪ್ರಥಮ ಸ್ಥಾನ ಪಡೆದು, ಮಹಿಳಾ ಕಂಠೀರವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಇದೇ ವಿಭಾಗದಲ್ಲಿ ರಕ್ಷಿತಾ ನಾರಾಯಣ ಸೂರ್ಯವಂಶಿ ದ್ವಿತೀಯ ಸ್ಥಾನ ಪಡೆದು ರನ್ನರ್ ಅಪ್ ಆಗಿದ್ದಾರೆ.
ಉತ್ಸವ ಎರಡನೇ ದಿನವಾದ ಶನಿವಾರ ಹೊಸಮಲಪನಗುಡಿಯ ಗಾಳೆಮ್ಮ ದೇವಸ್ಥಾನದ ಹಿಂಭಾಗದಲ್ಲಿನ ವಿದ್ಯಾರಣ್ಯ ಪೀಠದÀ ಹೈಸ್ಕೂಲ್ ಮೈದಾನದಲ್ಲಿ ಮಹಿಳಾ ಕುಸ್ತಿ ಪಂದ್ಯಾವಳಿಗಳು ಜರುಗಿದವು.
55 ರಿಂದ 57 ಕೆ.ಜಿ.ವಿಭಾಗದ ಅಂತಿಮ ಪಂದ್ಯದಲ್ಲಿ ಕಾವ್ಯ ತುಕರಾಮ ದಾನ್ವೇನವರ ಪ್ರತಿಸ್ಪರ್ಧಿ ಸೋನಿಯಾ ಗೋಪಾಲ ಜಾಧವ ಅವರ ವಿರುದ್ದು ಸೆಣಸಾಡಿ ಪ್ರಥಮ ಸ್ಥಾನ ಹಂಪಿ ಮಹಿಳಾ ಕೇಸರಿ ಪಟ್ಟ ತಮ್ಮದಾಗಿಸಿಕೊಂಡರು. ಸೋನಿಯಾ ಗೋಪಾಲ ಜಾಧವ ದ್ವೀತಿಯ ಸ್ಥಾನಕ್ಕೆ ತೃಪ್ತಿ ಪಟ್ಟಕೊಂಡರು.
51 ರಿಂದ 54 ಕೆ.ಜಿ.ವಿಭಾಗದಲ್ಲಿ ಐಶ್ವರ್ಯ ಪಿ ಕರಿಗಾರ ಪ್ರಥಮ ಸ್ಥಾನ ಪಡೆದುಕೊಂಡು ಹಂಪಿ ಕುಮಾರಿ ಎನಿಸಿಕೊಂಡರು. ಗಂಗೋತ್ರಿ ಮಾರುತಿ ಹುಲಿಕೊಪ್ಪನವರ ದ್ವಿತೀಯ ಸ್ಥಾನ ಪಡೆದರು.
50 ಕೆ.ಜಿ. ವಿಭಾಗದಲ್ಲಿ ಬಾಲಕಿ ಗೋಪನ್ವ ಮಂಜುನಾಥ ಖೋಡ್ಕಿ ಹಂಪಿ ಕಿಶೋರಿ ಎಂದೆನಿಸಿದರು. ಬಾಲಕಿ ಜಾನವಿ ದ್ವಿತೀಯ ಸ್ಥಾನ ಪಡೆದರು.
ವಿಜೇತ ಅಭ್ಯರ್ಥಿಗಳಿಗೆ ಹಂಪಿ ಉತ್ಸವ ಕ್ರೀಡಾ ಸಮಿತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಜಿ.ಪಂ.ಸಹಾಯಕ ಯೋಜನಾಧಿಕಾರಿ ಉಮೇಶ್ ಸೇರಿದಂತೆ ಮತ್ತಿತರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.