Home ಅಪರಾಧ ಹರಪನಹಳ್ಳಿ : ಮನೆಗೆ ಗುದ್ದಿದ ಲಾರಿ
ಅಪರಾಧ

ಹರಪನಹಳ್ಳಿ : ಮನೆಗೆ ಗುದ್ದಿದ ಲಾರಿ

Share
HARAPANAHALLI-ACCIDENT-LAARI
Share

ಹರಪನಹಳ್ಳಿ : ಕಬ್ಬು ತುಂಬಿದ್ದ ಲಾರಿಯು ಚಾಲಕನ ಅಜಾಗರೂಕತೆಯಿಂದ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಗೋಡೆಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ.
ಅರಸೀಕೆರೆಗೆ ಹೋಗುವ ಬೈಪಾಸ್ ರಸ್ತೆಯಲ್ಲಿರುವ ಸಾಲೇಹಾ ಅವರ ಮನೆಗೆ ಕೆಎ 19,  ಬಿ 7679 ನಂಬರಿನ ಲಾರಿಯು ಡಿಕ್ಕಿಯಾಗಿ ಗೋಡೆಗೆ ಹಾನಿಯಾಗಿದೆ.  ಲಾರಿಚಾಲಕ ತಲೆಮರೆಸಿಕೊಂಡಿದ್ದಾನೆ.
ನಿತ್ಯ ಹೊರಗಡೆ ಕುಳಿತು ಕೊಳ್ಳುತ್ತಿದ್ದ ಮನೆಯವರು ಗುರುವಾರ ‌ಊಟದ ಸಮಯವಾಗಿದ್ದರಿಂದ ಮನೆ ಒಳಗಡೆ ಎಂಟು ಜನರಿದ್ದರು. ಏಕಾಏಕಿ ಲಾರಿಯು ಮನೆಗೆ ಡಿಕ್ಕಿ ಹೊಡೆದು ನಿಂತುಕೊಂಡಿತು ಎಂದು ತಿಳಿಸಿದ್ದಾರೆ.
ದೌಡಾಯಿಸಿದ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು  ಚದುರಿಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ನಿಗಧಿತ ಪ್ರಮಾಣಕ್ಕಿಂತ ಹೆಚ್ಚು ಕಬ್ಬು ತುಂಬಿಕೊಂಡು  ಬರುವ ಲಾರಿಗಳನ್ನು ಚಾಲಕರು ನಗರದ ರಸ್ತೆಗಳಲ್ಲಿ ನಿರ್ಲಕ್ಷ್ಯದಿಂದ ಚಲಾಯಿಸುತ್ತಾರೆ. ಹಾನಿಯಾಗಿರುವ ಮನೆಯ ಮಾಲೀಕರಿಗೆ ಪರಿಹಾರ ಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಡಿವೈಎಸ್ಪಿ ‌‌ಸಂತೋಷ ಚೌವ್ಹಾಣ್,  ಸಿಪಿಐ ಮಹಾಂತೇಶ ಸಜ್ಜನ್, ಪಿಎಸ್ ಐ ಶಂಭುಲಿಂಗ ಹಿರೇಮಠ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ...

ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ...

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.