ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ರವರ ಸಹಕಾರದೊಂದಿಗೆ ದಾವಣಗೆರೆಯ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರೀತಿ ಆರೈಕೆ ಟ್ರಸ್ಟ್ ದಾವಣಗೆರೆ, ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಕ್ಷ್ಮಿ ನರಸಿಂಹ ಸೌಹಾರ್ದ ಬ್ಯಾಂಕಿನ ಅಧ್ಯಕ್ಷರಾದ ಲಕ್ಷ್ಮಿದೇವಿ ಅಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ:-ಗ್ರಾಮೀಣ ಪ್ರದೇಶದ ಬಡವರ ಅನುಕೂಲಕ್ಕಾಗಿ ಉಚಿತ ಅರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಯಿಲೆಗಳು ಹೆಚ್ಚಾಗುತ್ತಿದ್ದು ರೋಗ ನಿವಾರಣೆಗಾಗಿ ದೂರದ ದಾವಣಗೆರೆ, ಬೆಂಗಳೂರಿಗೆ ಹೋಗಬೇಕಾಗಿದೆ, ಬಡವರ ಅನುಕೂಲಕ್ಕಾಗಿ ಇಲ್ಲಿಗೆ ನುರಿತ ವೈದ್ಯರನ್ನು ಕರೆಸಿ ತಪಾಸಣೆಗೊಳಪಡಿಸಲಾಗಿದೆ.
ಪ್ರತಿಯೊಬ್ಬರೂ ಅರೋಗ್ಯದ ಬಗ್ಗೆ ಕಾಳಜಿ ವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.ಡಾ.ರವಿಕುಮಾರ್ ಟಿ.ಜಿ. ಶಸ್ತ್ರ ಚಿಕಿತ್ಸೆ ತಜ್ಞರು ಮತ್ತು ಜನರಲ್ ಸಜ್ಜನ್ ಮಾತನಾಡಿ:-
ಅರೋಗ್ಯ ಶಿಬಿರದಲ್ಲಿ ನುರಿತ ವೈದ್ಯರುಗಳ ತಂಡ, ಕೀಲು ಮೂಳೆ,ಹೃದಯ, ಪಿಜಿಸಿಯನ್, ಕ್ಯಾನ್ಸರ್ ಹಾಗೂ ಮೂತ್ರಪಿಂಡ ತಜ್ಞರನ್ನು ಕರೆಸಿದ್ದೇವೆ.
ಒಂದು ಕಾಯಿಲೆ ಪರೀಕ್ಷೆ ಮಾಡಿಸಲು ದಾವಣಗೆರೆ ಹಾಗೂ ಬೆಂಗಳೂರಿಗೆ ಹೋದರೆ ಐದು ಹಾಗೂ ಹತ್ತು ಸಾವಿರ ತೆಗೆದುಕೊಳ್ಳುತ್ತೇವೆ. ಇಂತಹ ಶಿಬಿರದಲ್ಲಿ ಪಾಲ್ಗೊಂಡರೆ ಎಲ್ಲಾ ಕಾಯಿಲೆಗಳ ಪರೀಕ್ಷೆಗಳನ್ನು ಮಾಡಿಸಬಹುದು, ಈ ಅವಕಾಶದ ಸದ್ಭಳಕೆ ಮಾಡಿಕೊಳ್ಳಬೇಕು, ಈ ಉಚಿತ ಶಿಬಿರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಹಾಗೂ ಅವರ ಕುಟುಂಬದ ಸಹಕಾರದೊಂದಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿಯೊಬ್ಬರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಿರಿ ಎಂದು ಹೇಳಿದರು.ಈ ಶಿಬಿರದಲ್ಲಿ 500 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೊಳಪಟ್ಟಿದ್ದರು.ಇದೇ ಸಂದರ್ಭದಲ್ಲಿ ಲಕ್ಷ್ಮಿ ನರಸಿಂಹ ಸೌಹಾರ್ದ ಬ್ಯಾಂಕಿನ ಅಧ್ಯಕ್ಷೆ ವೈ.ಡಿ.ಲಕ್ಷ್ಮೀದೇವಿ ಅಣ್ಣಪ್ಪ, ಆರೈಕೆ ಆಸ್ಪತ್ರೆಯ ಡಾ. ರವಿಕುಮಾರ್ ಟಿ.ಜಿ., ನಿಚ್ಚವ್ವನಹಳ್ಳಿ ಸುರೇಶ್,ವಿನೋದ್, ವಿಜಯ್ ಕುಮಾರ್,ಸೌಹಾರ್ದ ಬ್ಯಾಂಕಿನ ಸಿಬ್ಬಂದಿಗಳು,ವೈದ್ಯಾಧಿಕಾರಿಗಳು ಹಾಗೂ ರೋಗಿಗಳು ಹಾಜರಿದ್ದರು.
Leave a comment