Home ಅರಸೀಕೆರೆಯಲ್ಲಿ ಮೋಹರಂ ಆಚರಣೆ : ಸೌಹಾರ್ಧತೆಯ ಮೆರವಣಿಗೆ
Homeವಿಶೇಷ ವರದಿಗಳು

ಅರಸೀಕೆರೆಯಲ್ಲಿ ಮೋಹರಂ ಆಚರಣೆ : ಸೌಹಾರ್ಧತೆಯ ಮೆರವಣಿಗೆ

Share
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಪವಿತ್ರ ‘ಮೊಹರಂ’ ಹಬ್ಬವನ್ನು ಭಕ್ತಿ, ಸಡಗರ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ      ಆಚರಿಸಲಾಯಿತು.ಯಾವುದೇ ಜಾತಿ, ಮತ ಹಾಗೂ ಧರ್ಮದ ಭೇದಭಾವವಿಲ್ಲದೆ ಸರ್ವ ಧರ್ಮದವರೂ ಒಟ್ಟಾಗಿ ಸೇರಿ ಹಬ್ಬ ಆಚರಿಸಿ ಸೌಹಾರ್ದತೆಯ ಸಂದೇಶ ಸಾರಿದರು.

ಕನಕನಬಸಾಪುರ ಗ್ರಾಮದಿಂದ ಪೀರಲು ದೇವರನ್ನು ಅರಸೀಕೆರೆಗೆ ಭಕ್ತಿಯಿಂದ ಕರೆತರಲಾಯಿತು. ಇಲ್ಲಿನ ಪೀರಲು ದೇವರು ಹಾಗೂ ಕನಕನಬಸಾಪುರದ ಪೀರಲು ದೇವರನ್ನು ಒಟ್ಟಿಗೆ ಕೂರಿಸಿ, ದೇವರ ಕುರಿತು ಸಾಂಪ್ರದಾಯಿಕ ಪದಗಳನ್ನು ಹಾಡಿ ಅಲ್ಲಾಹುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಭಕ್ತಾದಿಗಳು ಪೀರಲು ದೇವರಿಗೆ ಸಕ್ಕರೆ, ಹಣ್ಣು, ಕಾಯಿ, ಹೂವು, ಉತ್ತತ್ತಿ ಹಾಗೂ ಚವಂಗಿಯನ್ನು ಅರ್ಪಿಸಿ ಧನ್ಯತೆ ಮೆರೆದರು.

ಊರಿನ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಪೀರಲು ದೇವರ ಭವ್ಯ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಕಲಾ ಪ್ರದರ್ಶನ ನೀಡಿದ ಹುಲಿವೇಷಧಾರಿಗಳ ಕುಣಿತವು ನೆರೆದಿದ್ದ ಸಾರ್ವಜನಿಕರ ಗಮನ ಸೆಳೆಯಿತು. ಜಾಮಿಯಾ ಮಸೀದಿ ಅಧ್ಯಕ್ಷ ಅಬೀಬ್ ಸಾಹೇಬ್, ಕಾರ್ಯದರ್ಶಿ ಖಾಜಿ ಮಹಮ್ಮದ್ ಸಾಹೇಬ್, ಪ್ರಮುಖರಾದ ವೈ.ಟಿ. ಕೊಟ್ರೇಶ್, ಹಸೇನ್ ಸಾಹೇಬ್, ಲಕ್ಷ್ಮೀದೇವಿ ಅಣ್ಣಪ್ಪ, ಫಯಾಜ್, ಭರ್ಕತ್, ಹುಸೇನ್ ಸಾಹೇಬ್, ಜಾಫರ್ ಸೇರಿದಂತೆ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.