Home ಸಹಕಾರ ಸಪ್ತಾಹ ” ಆಚರಣೆ ಅಂಗವಾಗಿ ಬೈಕ್ ಜಾತಕ್ಕೆ ಚಾಲನೆ
Homeಆರೋಗ್ಯ

ಸಹಕಾರ ಸಪ್ತಾಹ ” ಆಚರಣೆ ಅಂಗವಾಗಿ ಬೈಕ್ ಜಾತಕ್ಕೆ ಚಾಲನೆ

Share
Share

ಹರಪನಹಳ್ಳಿ : ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಸಹಕಾರ ಸಪ್ತಾಹ ‘ ಆಚರಣೆ ಹಿನ್ನೆಲೆಯಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಬೈಕ್ ಜಾಥಕ್ಕೆ ಚಾಲನೆ ನೀಡಲಾಯಿತು,

ವಿಜಯನಗರ ಜಿಲ್ಲಾ ಸಹಕಾರಿ ಇಲಾಖೆ, ಜಿಲ್ಲಾ ಸಹಕಾರಿ ಯೂನಿಯನ್, ಹರಪನಹಳ್ಳಿ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳು, ಟಿ.ಎ.ಪಿ.ಸಿ.ಎಂ.ಎಸ್, ಪಿಕಾರ್ಡ್ ಬ್ಯಾಂಕ್, ಹಾಗೂ ತಾಲೂಕ ಆರೋಗ್ಯ ಇಲಾಖೆ ಮತ್ತು  ಮೈಲಾರ ಕಣ್ಣಿನ ಆಸ್ಪತ್ರೆ ಹೊಸಪೇಟೆ ಹಾಗು ಅಡವಿಯಲ್ಲಿ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು  ಅಡವಿಹಳ್ಳಿ ಗ್ರಾಮ ಪಂಚಾಯತಿ ಕಾರ್ಯಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು,

ಸಪ್ತಾಹದ ಬೈಕ್ ಜಾಥಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಬಳ್ಳಾರಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಿ.ಎಂ ಶಿವಪ್ರಸಾದ್ ಹಾಗೂ ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ವೈ ಡಿ.ಅಣ್ಣಪ್ಪ ಚಾಲನೆ ನೀಡಿದರು.ಜಾಥಾ ಅಂಬೇಡ್ಕರ್ ಸರ್ಕಲ್ ನಿಂದ ( ಐ ಬಿ ಸರ್ಕಲ್) ಹಳೆ ಬಸ್ ಸ್ಟಾಂಡ್ ಮಾರ್ಗವಾಗಿ ಹರಿಹರ ಸರ್ಕಲ್ ವಾಲ್ಮೀಕಿ ನಗರ ಇಸ್ಲಾಂಪುರ ತಿಮ್ಮಲಾಪುರ ಮಾರ್ಗವಾಗಿ ಅಡವಿಹಳ್ಳಿ ವರೆಗೆ ಮುಂದುವರೆಯಿತು.

ಜಾಥ ಹಾಗೂ ಉಚಿತ ತಪಾಸಣಾ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಯೂನಿಯನ್ ನಿರ್ದೇಶಕ ದೊಡ್ಡಬಸಪ್ಪ, ಡಿ ಆರ್.ಜೆಎಂ ವೀರಭದ್ರಯ್ಯ, ತಾಲೂಕು ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ವೈ.ಡಿ ಅಣ್ಣಪ್ಪ, ಆರ್ ಸಿ ಎಸ್ ಕೃಷ್ಣ ನಾಯ್ಕ್, ಸಹಕಾರ ಅಭಿವೃದ್ಧಿ ಅಧಿಕಾರಿ  ಜಿಎಸ್ ಸುರೇಂದ್ರ, ಹಾಲು ಒಕ್ಕೂಟದ ವಿಸ್ತರಣ ಅಧಿಕಾರಿ ಮೃತ್ಯುಂಜಯ,

ಬಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಮರಿಸ್ವಾಮಿ, ಬಿ 90 ಸೊಸೈಟಿ  ಕಾರ್ಯದರ್ಶಿ ಬಸವರಾಜ್, ಟಿಎಪಿಎಂಸಿ ಕಾರ್ಯದರ್ಶಿ ತಿರುಪತಿ, ಸೇರಿದಂತೆ ವಿವಿಧ ಸಹಕಾರಿ ಸಂಘಗಳ ಕಾರ್ಯದರ್ಶಿಗಳು ಸಿಬ್ಬಂದಿಗಳು ಹಾಗು ಮೈಲಾರ ಆಸ್ಪತ್ರೆಯ ವೈದ್ಯರಾದ ಡಾ: ಅರವಿಂದ್ ಡಾ. ರಾಜಶೇಖರ್, ಡಾಕ್ಟರ್ ರೇಖಾ ಮುಂತಾದವರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು..

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.