Home ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ
Homeಸುದ್ದಿಗಳು

ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ

Share
small finance
Share

ಹರಪನಹಳ್ಳಿ   : ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಲು ಹಣಕಾಸಿನ ಶಿಸ್ತು ಹಾಗೂ ಡಿಜಿಟಲ್ ಸಾಕ್ಷರತೆ ಅತ್ಯಗತ್ಯ ಎಂದು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್  ಸಿಎಸ್ಆರ್ ವಿಭಾಗದ ಅಧಿಕಾರಿ ಪರಮೇಶ್ ತಿಳಿಸಿದರು.

ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಬ್ಯಾಂಕ್‌ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ವತಿಯಿಂದ ಆಯೋಜಿಸಲಾಗಿದ್ದ ಆರ್ಥಿಕ ಮತ್ತು ಡಿಜಿಟಲ್ ಸಾಕ್ಷರತೆ ಕುರಿತ ಜಾಗೃತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರೂ ತಮ್ಮ ಆದಾಯ, ಖರ್ಚು ಮತ್ತು ಉಳಿತಾಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು. ಜನರು ತಮ್ಮ ದೈನಂದಿನ ಆದಾಯ ಮತ್ತು ಖರ್ಚುಗಳ ದಿನಚರಿಯನ್ನು ನಿಯಮಿತವಾಗಿ ದಾಖಲಿಸಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಅನಗತ್ಯ ವೆಚ್ಚ ತಡೆಯಲು ಸಾಧ್ಯವಾಗುತ್ತದೆ ಎಂದರು.

ಪ್ರಧಾನಮಂತ್ರಿ ಜನಧನ್ ಯೋಜನೆ, ಸುಕನ್ಯಾ ಸಮೃದ್ದಿ, ಮುದ್ರಾ ಯೋಜನೆ, ಅಟಲ್‌ ಪಿಂಚಣಿ ಯೋಜನೆ, ಸುರಕ್ಞಾ ವಿಮೆ, ಅಂಚೆ ಕಚೇರಿ ಉಳಿತಾಯಗಳ ಬಗ್ಗೆ ಮಾಹಿತಿ ನೀಡಿದರು.ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಸಿಬ್ಬಂದಿ ವರ್ಗ ಹಾಗೂ ಕೂಲಹಳ್ಳಿ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.