Home ಸುದ್ದಿಗಳು ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  
ಸುದ್ದಿಗಳು

ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  

Share
harapanahalli nagarasabe
Share

ಹರಪನಹಳ್ಳಿ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಕಾರಣ ನಗರದ ವಿವಿಧೆಡೆ ಇಲ್ಲಿಯ ನಗರಸಭೆ ಅಧಿಕಾರಿಗಳು ಸಾರ್ವಜನಿಕರಿಗಾಗಿ ಉಚಿತ ನೀರಿನ ಅರವಟಿಗೆ ಶನಿವಾರ ಸ್ಥಾಪಿಸಿದ್ದಾರೆ.

ನಿತ್ಯ ತಾಪಮಾನ ಏರಿಕೆ ಆಗುತ್ತಿರುವ ಕಾರಣ, ಸಾರ್ವಜನಿಕರು ನೀರಿನ ದಾಹ ಪೂರೈಸಲು ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಇಜಾರಿ ಶಿರಸಪ್ಪ ವೃತ್ತ (ಬಸ್ ನಿಲ್ದಾಣ)ದ ಬಳಿ,  ಕೊಟ್ಟೂರು ರಸ್ತೆಯ ಬಸ್ ನಿಲ್ದಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಆರಂಭಿಸಲಾಗಿದ್ದು, ನಗರದಲ್ಲಿ ಓಡಾಡುವ ಸಾರ್ವಜನಿಕರು ಈ ಅವಕಾಶ ಬಳಸಿಕೊಂಡು, ನೀರು ಸೇವಿಸಿ ಎಂದು ಪೌರಾಯುಕ್ತೆ ರೇಣುಕಾ ಎಸ್‍ ದೇಸಾಯಿ ಅವರು ಮಾಹಿತಿ ನೀಡಿದರು.

ನೀರಿನ ಅರವಟಿಗೆ ಸ್ಥಾಪಿಸಲು ಆಗ್ರಹಿಸಿ ಏ 16ರಂದು ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿತ್ತು. ಇದು ನಾವು ಮಾಡಿದ ಹೋರಾಟದ ಪ್ರತಿಫಲ ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ತಿಳಿಸಿದರು.  ನಗರಸಭೆ ಕಚೇರಿ ವ್ಯವಸ್ಥಾಪಕ ಅಶೋಕ ಅವರು ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.