Home ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

Share
nivrutta
Share

ಹರಪನಹಳ್ಳಿ: “ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ” ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು.

ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು” ಎಂದು ಮನೋಹರ ಅವರು ಕಿವಿಮಾತು ಹೇಳಿದರು.

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, “ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ” ಎಂದರು.

ಮಂಜುನಾಥ ಪೂಜಾರ್ ಅವರು ಮಾತನಾಡಿ, “ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ” ಎಂದು ಹಾರೈಸಿದರು.

ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು “ಪ್ರೀತಿಯ ಗಾಳಿ ಬೀಸುತ್ತಿದೆ…” ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.

 ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಷರೀಪ್ ಮಕರಬ್ಬಿ, ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಗೌರವಾಧ್ಯಕ್ಷ ಎನ್‍.ಟಿ.ಸೋಮಪ್ಪ, ಜಿಲ್ಲಾ ಉಪಾಧ್ಯಕ್ಷ ಕೆ.ಅಂಜಿನಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಗುರುಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಅಧ್ಯಕ್ಷ ಎಲ್‍.ಎಚ್.ಗಿರಿರಾಜ್, ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ಸುಬ್ಬಣ್ಣ,  ಶಿಕ್ಷಣ ಸಂಯೋಜಕ ವೀರೇಶ ಮಾತನಾಡಿದರು. ಶಿಕ್ಷಕರಾದ ಎಸ್. ಮಕಬುಲ್ ಬಾಷ, ಪಿ. ಬಸವರಾಜ್, ಬಣಕಾರ್ ಮಂಜುನಾಥ, ಕರಿಬಸಪ್ಪ, ವೀರಪ್ಪ, ಜಯಲಕ್ಷ್ಮೀ, ಸವಿತ, ಶಿಲ್ಪ, ಕುಸುಮಾ, ಜಮಾಲುದ್ದೀನ್, ಚಂದ್ರಪ್ಪ, ಉಷಾ, ಮಂಜ್ಯಾನಾಯ್ಕ ಸೇರಿದಂತೆ ನೂರಾರು ಶಿಕ್ಷಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.