Home ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ
Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

Share
Share

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ ದಂಪತಿ ಕಾರ್ಯ ಶ್ಲಾಘನೀಯ ಎಂದು ಜೆಸಿಐ ಅಲುಮ್ನಿ ಕ್ಲಬ್ ವಲಯ 24ರ ಅಧ್ಯಕ್ಷ ಎನ್‍.ಮಹಾಬಲೇಶ್ವರ ದಿವಾಕರ ಅಭಿಪ್ರಾಯಪಟ್ಟರು.

ನಗರದ ಬಸಮ್ಮ ಕಲಾಮಂದಿರದಲ್ಲಿ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ, ಜೆಸಿಐ ಅಲುಮ್ನಿ ಕ್ಲಬ್ ಭಾನುವಾರ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಣವಿದ್ದವರು ಹೆಚ್ಚು ಜನ ಇದ್ದಾರೆ, ಕನ್ನಡಕ್ಕಾಗಿ ಕೆಲಸ ಮಾಡುವವರ ಸಂಖ್ಯೆ ವಿರಳ. ಇಂತಹ ಸಂದರ್ಭದಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಶ್ರಮಿಸುವ ಸಂಘಗಳನ್ನು ಪ್ರತಿಯೊಬ್ಬರು ಬೆಂಬಲಿಸುವ ಅಗತ್ಯವಿದೆ, ಸರ್ಕಾರವೂ ಇಂತಹ ಸಂಸ್ಥೆ ಗುರುತಿಸಿ ಪ್ರೋತ್ಸಾಹ ನೀಡಬೇಕು ಎಂದರು.

ಕನ್ನಡ ಉಪನ್ಯಾಸಕ ಎಚ್.ಮಲ್ಲಿಕಾರ್ಜುನ ಮಾತನಾಡಿ, ಸರ್ಕಾರದಿಂದ ಯಾವುದೇ ಅನುದಾನ ಪಡೆಯದೇ 27 ವರ್ಷಗಳಿಂದ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂತಹ ಅನೇಕ ಕನ್ನಡ ಪರವಾದ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆ ಏರ್ಪಡಿಸುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಇದನ್ನು ಸದ್ವಿನಿಯೋಗ ಮಾಡಿಕೊಳ್ಳಿ ಎಂದು ಹೇಳಿದರು.

ಪತ್ರಕರ್ತ ಡಿ. ವಿಶ್ವನಾಥ ಮಾತನಾಡಿ, ಸಮಾಜಕ್ಕೆ ಮಾದರಿಯಾಗುವಂತಹ ಹತ್ತು-ಹಲವು ಜನಪರ ಕಾರ್ಯಗಳು ಈ ವೇದಿಕೆಯಿಂದ ನಿರಂತರವಾಗಿ ನಡೆಯುತ್ತಾ ಬಂದಿವೆ. ಸಂಸ್ಥೆಯ ಈ ಸತ್ಕಾರ್ಯಗಳು ಮುಂದಿನ ದಿನಗಳಲ್ಲೂ ಯಶಸ್ವಿಯಾಗಿ ಸಾಗಲಿ ಎಂದು ಹೇಳಿದರು.

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಡಿ.ಅರ್ಚನಾ, ಸಂಗೀತ, ಸಂಗೀತಾ, ಶೀಗನಹಳ್ಳಿ ಬಿಂದು, ಕೆ.ಜಿ.ಪ್ರತಿಭಾ, ಜಿ.ಸುಶೀಲಾ, ನಿಕೇತನ, ಭಾರ್ಗವಿ, ಎಸ್.ಎಂ.ರಕ್ಷಿತಾ, ಜಿ.ಸುಶೀಲಾ ಅವರಿಗೆ ರಾಜ್ಯಮಟ್ಟದ ‘ಕನ್ನಡ ರತ್ನ ಪ್ರಶಸ್ತಿ’,  ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಒಟ್ಟು 300 ಜನ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನವಜ್ಯೋತಿ ಸಂಸ್ಥೆ ಅಧ್ಯಕ್ಷೆ ಸಪ್ನ ಮಲ್ಲಿಕಾರ್ಜುನ ಅಧ್ಯಕ್ಷತೆವಹಿಸಿದ್ದರು. ಮುಖಂಡರಾದ ಎ.ಎಚ್.ಪಂಪಣ್ಣ, ಗುಂಡಗತ್ತಿ ಕೊಟ್ರಪ್ಪ , ನೂರುದ್ದಿನ್, ಇರ್ಷಾದ್ ಭಾಷ ಮಾತನಾಡಿದರು. ಕೆ.ಪ್ರಭಾಕರ, ಪಿ.ಟಿ.ನಾಗರಾಜ್, ತಿಲಕ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.