Home ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ
Homeಸುದ್ದಿಗಳು

ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ

Share
Share

ಹರಪನಹಳ್ಳಿ : ರಾಜ್ಯಾಧ್ಯಂತ ಮಾದರ ಮಹಾಸಭಾ ಸದೃಢವಾಗಿ ಕಟ್ಟಲು ಸದಸ್ಯತ್ವ ನೊಂದಾಣಿ ಆರಂಭಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಾದಿಗ ಸಮಾಜದವರು ಹೆಸರು ನೊಂದಾಯಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ನಿಂಬಗಲ್ ರಾಮಕೃಷ್ಣ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಹರಪನಹಳ್ಳಿ, ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು ತಾಲ್ಲೂಕಿನಲ್ಲಿರುವ ಸಮಾಜದ ಬಾಂಧವರು ಸ್ವಯಂ ಪ್ರೇರಿತರಾಗಿ ನೊಂದಾಣಿ ಮಾಡಿಸಿಕೊಳ್ಳಬೇಕು. ಇದರಿಂದ ಆರ್ಥಿಕವಾಗಿ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಮಾದರ ಮಹಾಸಭಾವನ್ನು ಮಾಡಲು ನಾವು ಈಗ ತೀರ್ಮಾನಿಸಿದ್ದೇವೆ. ಸಮುದಾಯದ ಬಲವರ್ದನೆಗಾಗಿ ಮಹಾಸಭಾದ ಸದಸ್ಯತ್ವ ಅಭಿಯಾನದಲ್ಲಿ ನೋಂದಣಿ ಮಾಡಿಸಬೇಕು. ಯಾವುದೇ ಪಕ್ಷದಲ್ಲಿರಲಿ, ಪಕ್ಷವನ್ನು ಬದಿಗಿಟ್ಟು, ಮಾದಿಗ ಸಮಾಜ ಸದೃಢಗೊಳಿಸಲು ಪ್ರಮಾಣಿಕ ಪ್ರಯತ್ನ ಮಾಡಿ ಎಂದು ತಿಳಿಸಿದರು.

ಮಾದರ ಮಹಾಸಭಾದ ಜಿಲ್ಲಾ ಉಪಾದ್ಯಕ್ಷ ಎಚ್.ಪೂಜಾಪ್ಪ ಮಾತನಾಡಿ, ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುವುದು ಮಹಾಸಭಾದ ಪ್ರಮುಖ ಉದ್ದೇಶ. ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ತಾಲ್ಲೂಕು ಅಧ್ಯಕ್ಷ ಹುಲಿಕಟ್ಟೆ ಚಂದ್ರಪ್ಪಮಾತನಾಡಿ, ತಾಲ್ಲೂಕಿನಿಂದ 1500 ಜನ ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ, ಇದಕ್ಕೆ ವಿವಿಧ ಹಳ್ಳಿಯಲ್ಲಿರುವ ಸಮಾಜದವರು ಸಹಕರಿಸಲು ಮನವಿ ಮಾಡಿದರು.

ಕರ್ನಾಟಕ ಮಾದರ ಮಹಾಸಭಾ ಕಾರ್ಯದರ್ಶಿ ಬದ್ದಿ ಮರಿಸ್ವಾಮಿ , ಪೂಜಾರ ಮರಿಯಪ್ಪ, ನಿಚ್ಚವ್ವನಹಳ್ಳಿ ಭಿಮಪ್ಪ, ಕಂಚಿಕೇರಿ ಕೆಂಚಪ್ಪ, ಹಲುವಾಗಲು ರಮೇಶ, ಸುವರ್ಣಮ್ಮ, ಹಂಚಿನಮನೆ ಕೆಂಚಪ್ಪ, ಹಲುವಾಗಲು ರಮೇಶ್ ಮಾತನಾಡಿದರು. ಹೊಸಪೇಟೆ ಎಪಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ, ಮೈದೂರು ರಾಮಪ್ಪ, ಶೃಂಗಾರತೋಟ ನಿಂಗರಾಜ್, ಮಹಾಂತೇಶ, ಒ.ಮಹಾಂತೇಶ, ಕಬ್ಬಳ್ಳಿ ಪರಸಪ್ಪ, ನೀಲಗುಂದ ಸಣ್ಣಪ್ಪ, ನಾಗೇಂದ್ರಪ್ಪ, ಎಸ್.ಎನ್.ಕುಮಾರ, ನಾಗಪ್ಪ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeಸುದ್ದಿಗಳು

ಅರಸೀಕೆರೆಯಲ್ಲಿ 6ನೇ ತಾಲ್ಲೂಕು ಸಮ್ಮೇಳನಕ್ಕೆ ಸಮ್ಮತಿ

ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ...

Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್...

Homeಸುದ್ದಿಗಳು

ಬಡ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಕಲಬುರಗಿ: ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ ವತಿಯಿಂದ ಕೊತ್ತನೂರಿನ ಸೇಂಟ್ ಮೇರಿಸ್ ಶಾಲೆಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.