Home ಸುದ್ದಿಗಳು  ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ
ಸುದ್ದಿಗಳು

 ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ

Share
Share

ಹರಪನಹಳ್ಳಿ ಹೊಸ ಬಸ್‌ ನಿಲ್ದಾಣಕ್ಕೆ ಕಾಯ್ದಿರಿಸಿದ ಜಾಗ

ಹರಪನಹಳ್ಳಿ : ನ್ಯಾಯಾಲಯ ಆದೇಶ ದಿಕ್ಕರಿಸಿ ಸರ್ವೆ ನಂಬರ್‌ 539/ಬಿ1ಬಿ ವಿಸ್ತೀರ್ಣದಲ್ಲಿ 1 ಎಕರೆ 42 ಸೆಂಟ್ಸ್‌ ಭೂಮಿಯನ್ನು ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲು ಹೊರಟಿದ್ದಾರೆ ಎಂದು ಮುಸ್ಲಿಂ ಸಮಾಜದ ಮುಖಂಡರು ಆರೋಪಿಸಿದ್ದಾರೆ.

ಸರ್ಕಾರದಿಂದ ಪಟ್ಟಾ ಪಡೆದಿರುವ ಬೇಲ್ದಾರ್‌ ಲಕ್ಷ್ಮಯ್ಯ ಅವರು 1 ಎಕರೆ 42 ಸೆಂಟ್ಸ್‌ ಭೂಮಿ ಮಾರಾಟ ಮಾಡಿದ್ದು, ಇದೇ ಜಾಗವನ್ನು ಇಜಂತಕರ್‌ ಜಯಪ್ರಕಾಶ್‌ ಅವರು ಬೇರೆಯವರಿಗೆ ಮಾರಾಟ ಮಾಡಿದ್ದು, ಈಗ ಅಮಿನಾ ಮೊಹಮ್ಮದಿ ಅವರ ಹೆಸರಿನಲ್ಲಿದೆ. ಇದರ ಡೋರ್‌ ನಂಬರ್‌ 399/1817/ಎ26/ಎ ಪುರಸಭೆ ಕೊಟ್ಟಿದೆ. ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ತಡೆಯಾಜ್ಞೆ ಆದೇಶವಿದ್ದರೂ ಸಹ ಅಧಿಕಾರಿಗಳು ಯಾವುದೇ ನೊಟೀಸ್‌ ಜಾರಿಮಾಡದೇ ದೌರ್ಜನ್ಯದಿಂದ ಕಬಳಿಸುತ್ತಿದ್ದಾರೆ.

ಜನಗಳು ವಾಸವಿರುವ ಜಾಗದಲ್ಲಿ ಬಸ್‌ ನಿಲ್ದಾಣ ಕಟ್ಟಿಸಬಾರದು. ವಾಸವಿರುವ ಜನಗಳನ್ನು ಒಕ್ಕಲೆಬ್ಬಿಸಬಾರದು.  ಶಾಸಕರು ಮತ್ತು ಅಧಿಕಾರಿಗಳು ಪಟ್ಟಣಕ್ಕೆ ಹೊಂದಿಕೊಂಡಿರುವ ಜಾಗ ಖರೀದಿಸಿ ನೂತನ ಸರ್ಕಾರಿ ಬಸ್‌ ನಿಲ್ದಾಣ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾವುದು ಎಂದು ಅಂಜುಮನ್‌ ಸಮಿತಿ ಮಾಜಿ ಅಧ್ಯಕ್ಷ ಡಿ.ಮುಜಿಬರ್‌ ರೆಹಮಾನ್‌ , ಪುರಸಭೆ ಮಾಜಿ ಸದಸ್ಯ ಡಿ.ಜಹೂರು, ಇಜಂತಕರ್‌ ರಾಜು, ಕಲೀಮುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಪನಹಳ್ಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಮಾತನಾಡಿ, ‘ಕೋಟೆ ಕಾಳಮ್ಮ ದೇವಸ್ಥಾನದ ಬಳಿಯಿರುವ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಲಾಗಿದೆ. ಆ ಪ್ರದೇಶವನ್ನು ಯಾವುದೇ ಸಮಾಜಕ್ಕೆ ಕೊಟ್ಟಿಲ್ಲ. ಆ ಜಾಗವನ್ನು ಉಯೋಗಿಸಿಲ್ಲದ ಕಾರಣ, ಈಗ ಬೇರೊಂದು ಸಾರ್ವಜನಿಕ ಉದ್ದೇಶಕ್ಕೆ ಆ ಸ್ಥಳವನ್ನು ಕಾಯ್ದಿರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.