Home ಹರಪನಹಳ್ಳಿ: ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಾ ಪುರಸ್ಕಾರ
Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಪ್ರತಿಭಾ ಪುರಸ್ಕಾರ

Share
Share

ಹರಪನಹಳ್ಳಿ : ನಟರಾಜ ಕಲಾ ಭವನದಲ್ಲಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಜರುಗಿತು.

ಉದ್ಘಾಟಿಸಿ ಶಾಸಕಿ ಲತಾ ಮಲ್ಲಿಕಾರ್ಜುನ್ ಮಾತನಾಡಿ, ದೇಶದ ಸ್ವಾತಂತ್ರ್ಯ ಹಾಗೂ ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೋರಾಟ ಸ್ಮರಿಸಿದರು. ನಾವು ಮಾಡುವ ಕೆಲಸವನ್ನು ಜನ ಮೆಚ್ಚುವುದಕ್ಕಿಂತ ದೇವರು ಮೆಚ್ಚುವಂತೆ ಮಾಡಬೇಕು. ನಮ್ಮ ತಂದೆ ತೋರಿದ ಹಾದಿಯಲ್ಲೇ ನಮ್ಮ ಕಾರ್ಯಗಳು ಸಾಗುತ್ತಿವೆ. ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳೆಸಿಕೊಂಡು ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಯಾರಿಗೂ ಅನ್ಯಾಯ ಆಗದಂತೆ ನ್ಯಾಯದ ಪರವಾಗಿ ಕೆಲಸ ಮಾಡೋಣ ಎಂದರು.

ಅತ್ಯುತ್ತಮ ಪ್ರಶ್ನೆಗಳನ್ನು ಕೇಳುತ್ತಿದ್ದರೆ ಮಾತ್ರ ಉತ್ತಮ ಸಮಾಜ ಕಟ್ಟಲು ಸಾಧ್ಯ. ಇಲ್ಲವಾದರೆ ನಾವು ಆರ್ಥಿಕ ಮತ್ತು ಸಾಮಾಜಿಕ ನ್ಯಾಯದಿಂದ ದೂರ ಉಳಿಯುತ್ತೇವೆ. ಪ್ರತಿಯೊಬ್ಬರೂ ಪ್ರಶ್ನಿಸುವ ಸಾಮರ್ಥ್ಯ ಹಾಗೂ ನಿರಂತರ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರಾಜಕೀಯ ಭಿನ್ನಾಭಿಪ್ರಾಯ ಮರೆತು ಮಕ್ಕಳ ಭವಿಷ್ಯ ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ” ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಕನ್ನಡ ಪ್ರಾಧ್ಯಾಪಕ ಸತೀಶ ಪಾಟೀಲ್ ಮಾತನಾಡಿ, ಪ್ರತಿಯೊಬ್ಬರಲ್ಲೂ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಸಮಾಜದ ಮುಂದೆ ತರುವ ಕೆಲಸವನ್ನು ಈ ಸಂಘಟನೆ ಮಾಡುತ್ತಿರುವುದು ಎಲ್ಲರಿಗೂ ಮಾದರಿ ಎಂದು ತಿಳಿಸಿದರು.

ಪಂಚಮಸಾಲಿ ಸಮಾಜದ ಮುಖಂಡ ವೀರಣ್ಣ ಮಾತನಾಡಿ, ಹರಪನಹಳ್ಳಿಯ ವೃತ್ತವೊಂದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡಲು ಈಗಾಗಲೇ ಮನವಿ ಮಾಡಲಾಗಿದೆ. ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಒಂದು ಬಾಲಕಿಯರ ವಸತಿ ನಿಲಯ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಜಿ.ಮನೋಹರ, ಪಂಚಮಸಾಲಿ ನೌಕರರ ಸಂಘದ ಅಧ್ಯಕ್ಷ ಜಿ.ಕರಿಬಸಪ್ಪ, ಮುಖಂಡರಾದ ಶಶಿಧರ್ ಪೂಜಾರ, ವೀರಣ್ಣ ಅಂಗಡಿ, ಕನ್ನಿಹಳ್ಳಿ ಪ್ರಭಾಕರ್, ಎಚ್.ನಾಗರಾಜ್ , ಪೂಜಾರ ವಿ. ಮಹೇಶ್, ಕರಿಬಸಪ್ಪ, ರಾಜೇಂದ್ರ, ಅರುಂಡಿ ನಾಗರಾಜ್, ಅಡವಿಹಳ್ಳಿ ಮಂಜುನಾಥ್, ಓಂಕಾರ ಗೌಡ, ಸತೀಶ್, ಕರಿಬಸವರಾಜ, ವಿನಯ ದಿವಾಕರ, ಚೆನ್ನನಗೌಡ, ಹೆಚ್. ಮಲ್ಲಿಕಾರ್ಜುನ, ರಾಜೇಂದ್ರ ಗೌಡ, ಜಿ.ಕೆ. ಮಲ್ಲಿಕಾರ್ಜುನ್, ಅರಸೀಕೆರೆ ಪಂಪಣ್ಣ, ಉಮಾ, ಅಡವಿಹಳ್ಳಿ ಬಸವರಾಜ, ವೀರಣ್ಣ , ಲಕ್ಷ್ಮಣ ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.