ಹರಪನಹಳ್ಳಿ : ಪಟ್ಟಣದ ಹೊರ ಹೊಲದಲ್ಲಿರುವ ಪ್ರಕೃತಿ ವಿದ್ಯಾ ಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವತಂತ್ರೋತ್ಸವದ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣಕ್ಕೆ ಅತಿಥಿಯಾಗಿ ಅದೇ ಶಾಲೆಯಲ್ಲಿ ಕೆಲಸ ಮಾಡುವಂತಹ ಒಬ್ಬ ಸಾಮಾನ್ಯ ಕೆಲಸಗಾರನಾದ ಅರಬಿ ಕೆಂಚಪ್ಪ ನಿಂದ ಧ್ವಜಾರೋಹಣ ಮಾಡಿಸಲಾಯಿತು.
ಭಾರತೀಯ ಪ್ರತಿಯೊಬ್ಬ ಪ್ರಜೆಗೂ ಸಹ ಧ್ವಜಾರೋಹಣ ಮಾಡುವ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಕೃತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ಸೇರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಸುಮ ಉಪ್ಪಿನ ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅರಬಿ ಕೆಂಚಪ್ಪ ಅವರು ಮಾತನಾಡಿ ನನ್ನಂತಹ ಒಬ್ಬ ಸಾಮಾನ್ಯ ಕೆಲಸಗಾರರಿಗೂ ಸಹ ಧ್ವಜಾರೋಹಣ ಮಾಡುವ ಅವಕಾಶ ಸಿಗುವುದೆಂದು ನಾನು ಅಂದುಕೊಂಡಿರಲಿಲ್ಲ ಈ ಸುವರ್ಣ ಅವಕಾಶವನ್ನು ಕಲ್ಪಿಸಿಕೊಟ್ಟ ನನ್ನ ಆಡಳಿತ ಮಂಡಳಿಯ ಎಲ್ಲಾ ಸದಸ್ಯರಿಗೂ ನಾನು ಆಭಾರಿಯಾಗಿರುತ್ತೇನೆ ಎಂದು ಹೇಳಿದರು.
ಮುಂದುವರಿದು ಮಾತನಾಡುತ್ತಾ ನನಗೆ ಭಾಷಣ ಮಾಡಲು ಬರುವುದಿಲ್ಲ ನಾನು ಕೆಲಸಗಾರನಷ್ಟೇ ಆದರೂ ನನಗೆ ತಿಳಿದ ಮಟ್ಟಿಗೆ ದೇಶ ಎಂದರೆ ನಿಷ್ಠೆ ವಿದ್ಯಾರ್ಥಿಗಳಾದ ನೀವು ದೇಶದ ಬಗ್ಗೆ ಪ್ರೇಮ ಮತ್ತು ಪ್ರಾಮಾಣಿಕತೆಯನ್ನು ಹೊಂದಬೇಕು ಎಂದು ತಿಳಿಸಿದರು. ಪ್ರಕೃತಿ ವಿದ್ಯಾ ಸಂಸ್ಥೆಯ ಖಜಾಂಚಿಗಳಾದ ಚೆನ್ನೇಶ್ ಬಣಕಾರ್ ಮಾತನಾಡಿ ಬರಿ ಗಣ್ಯ ವ್ಯಕ್ತಿಗಳಿಂದ ಮಾತ್ರ ಧ್ವಜಾರೋಹಣ ಮಾಡಿಸುವುದು ದೇಶಭಕ್ತಿಯಲ್ಲ ಭಾರತದಲ್ಲಿ ಹುಟ್ಟಿರುವ ಪ್ರತಿಯೊಬ್ಬರೂ ಸಹ ಧ್ವಜಾರೋಹಣಕ್ಕೆ ಅರ್ಹರು.
ಹಾಗಾಗಿ 15 ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಕೆಂಚಪ್ಪ ಇವರನ್ನು ಧ್ವಜಾರೋಹಣಕ್ಕೆ ನಮ್ಮ ಆಡಳಿತ ಮಂಡಳಿಯವರು ಮುಕ್ತ ಮನಸ್ಸಿನಿಂದ ಆಹ್ವಾನಿಸಿದ್ದೇವೆ ಎಂದರು ಮತ್ತು ಅವರಿಗೆ ಸಿಗಬೇಕಾದ ಗೌರವ ಎನ್ ಸಿ ಸಿ ಸ್ಕೌಟ್ ಅಂಡ್ ಗೈಡ್ಸ್ ಮತ್ತು ಹೌಸ್ ಮಕ್ಕಳಿಂದ ಧ್ವಜ ಗೌರವವನ್ನು ನೀಡಲಾಯಿತು ಎಂದರು .ಇದೇ ಸಂದರ್ಭದಲ್ಲಿ ಮಕ್ಕಳಿಂದ ಹಾಗೂ ಶಿಕ್ಷಕರಿಂದ ಭಾಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಪ್ರಕೃತಿ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷರಾದ ಶಶಿಧರ್.ಕಾರ್ಯಕ್ರಮದಲ್ಲಿ ಪ್ರಕೃತಿ ವಿದ್ಯಾ ಸಂಸ್ಥೆಯ ಗೌರವಾಧ್ಯಕ್ಷರಾದ ಶಶಿಧರ್ ಪೂಜಾರ , ಅಧ್ಯಕ್ಷರಾದ ನಾಗೇಶ್ ಉಪ್ಪಿನ್ ಉಪಾಧ್ಯಕ್ಷರಾದ ವಿರೂಪಾಕ್ಷಪ್ಪ ಕಾರ್ಯದರ್ಶಿಗಳಾದ ಬಸವರಾಜ್ ಹುಲ್ಲತ್ತಿ ನಿರ್ದೇಶಕರಾದ ಮಂಜುನಾಥ್ ಪೂಜಾರ್ ಪರ್ಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸುಮನ್ ನಾಗೇಶ್ ಉಪ್ಪಿನ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Leave a comment