Home ಸುದ್ದಿಗಳು ಹರಪನಹಳ್ಳಿ : ಪಂಚಮಸಾಲಿ ಸಹಕಾರಿ ಸಂಘಕ್ಕೆ ಪ್ರಭಾಕರ ಅಧ್ಯಕ್ಷ 
ಸುದ್ದಿಗಳು

ಹರಪನಹಳ್ಳಿ : ಪಂಚಮಸಾಲಿ ಸಹಕಾರಿ ಸಂಘಕ್ಕೆ ಪ್ರಭಾಕರ ಅಧ್ಯಕ್ಷ 

Share
ಹರಪನಹಳ್ಳಿ : ಪಂಚಮಸಾಲಿ ಸಹಕಾರಿ ಸಂಘಕ್ಕೆ ಪ್ರಭಾಕರ ಅಧ್ಯಕ್ಷ 
Share

ಹರಪನಹಳ್ಳಿ : ಇಲ್ಲಿಯ ವೀರಶೈವ ಪಂಚಮಸಾಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಆಯ್ಕೆ ಮಾಡಲಾಯಿತು.

ನಗರದ ಗೊರವಿನ ತೋಟದಲ್ಲಿರುವ ವೀರಶೈವ ಪಂಚಮಸಾಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ.ಆರ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರಭಾ ಅಜ್ಜಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಬಿ.ಎರ್ರಿಸ್ವಾಮಿ ಅವರು ಅಧಿಕೃತವಾಗಿ ಘೋಷಿಸಿದರು. ನೂತನ ಆಡಳಿತ ಮಂಡಳಿಯ ಸದಸ್ಯರಾಗಿ ಜಿ.ವಿಜಯಕುಮಾರ್, ಪೂಜಾರ್ ಚಂದ್ರಶೇಖರ್, ದೇವರಾಜ್ (ಹೂವಿನ ಅಂಗಡಿ), ಪೂಜಾರ್ ಮಂಜುನಾಥ,  ರಾಜಶೇಖರ್ ಹಿರೇಮಗಳಿಗೆರಿ, ಪೂಜಾರ್ ಬಸರಾಜಪ್ಪ ತೆಲಿಗಿ, ಶ್ರೀಮತಿ ಕಾವ್ಯ ಕೊಟ್ರೇಶ್, ಪೂಜಾರ್ ವಾಗೀಶ್, ಎ.ಎಚ್. ನಾಗರಾಜ್ (ಅರಸೀಕೆರೆ),  ಅವರು ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪೂಜಾರ ವೀರಮಲ್ಲಪ್ಪ, ಪೂಜಾರ ಶಶಿಧರ, ಡಾ. ಮಲ್ಕಪ್ಪ ಅಧಿಕಾರ, ಅಜ್ಜಣ್ಣ ಮತ್ತಿಹಳ್ಳಿ,  ಆರ್. ಈಶ್ವರಪ್ಪ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ರಾಜಕುಮಾರ ಅವರು ಆಯ್ಕೆ ಸಮಿತಿಯಲ್ಲಿ ಉಪಸ್ಥಿತರಿದ್ದರು.

‘ಸಂಘದ ಸಮಗ್ರ ಅಭಿವೃದ್ಧಿ, ಸದಸ್ಯರ ಹಿತಾಸಕ್ತಿ ರಕ್ಷಣೆ ಹಾಗೂ ಸೌಹಾರ್ದ ಚಳವಳಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇವೆ’.

                                                                                                                                                                                          ಬಿ.ಆರ್. ಪ್ರಭಾಕರ

                                                                                                                                                                         ನೂತನ ಅಧ್ಯಕ್ಷ, ಪಂಚಮಸಾಲಿ ಸಂಘ. ಹರಪನಹಳ್ಳಿ

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.