ಹರಪನಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಾಲ್ಲೂಕಿನ ಬಳಿಗನೂರು ಗ್ರಾಮದ ಪ್ರತಿಭೆ ಡಿ.ಎಂ.ಅರ್ಚನಾ ಅವರಿಗೆ ಶನಿವಾರ ವಿವಿಧ ಸಂಘಟನೆಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಡಿ.ಹನುಮಂತಪ್ಪ ಮತ್ತು ರೇಣುಕಮ್ಮ ದಂಪತಿಯ ಪುತ್ರಿಯಾದ ಅರ್ಚನಾ, ಕುಗ್ರಾಮ ಬಳಿಗನೂರಿನಿಂದ ನಿತ್ಯ ಕೊಟ್ಟೂರಿನ ಇಂದು ಪಿಯು ಕಾಲೇಜಿಗೆ ಪ್ರಯಾಣಿಸಿ ಸಾಧನೆ ಮಾಡಿದ್ದಾರೆ. ಇವರ ಈ ಅಸಾಧಾರಣ ಸಾಧನೆಯನ್ನು ಮೆಚ್ಚಿ ಗಣ್ಯರು ಗ್ರಾಮಕ್ಕೆ ಭೇಟಿ ನೀಡಿ ಅಭಿನಂದಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಬಿಜೆಪಿ ಬಳ್ಳಾರಿ ವಿಭಾಗದ ಸಹ ಪ್ರಭಾರಿ ಚೆನ್ನಬಸವನಗೌಡ ಪಾಟೀಲ್, ಜಿಲ್ಲಾ ಉಪಾಧ್ಯಕ್ಷ ಬಲ್ಲಹುಣ್ಸಿ ರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಳಿಗಿ ವೀರೇಂದ್ರ, ಮುಖಂಡರಾದ ಪಿ.ಎಚ್.ಕೊಟ್ರೇಶ್, ಪಂಪಾಪತಿ, ಉದಯಕುಮಾರ, ಮಂಜುನಾಥ ಗೌಡ, ಕಣಿವಿಹಳ್ಳಿ ಮಂಜುನಾಥ, ಮೈದೂರು ಮಲ್ಲಿಕಾರ್ಜುನ್ ಹಾಗೂ ಇತರರು ಉಪಸ್ಥಿತರಿದ್ದರು.
Leave a comment