ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮಂಗಳವಾರ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಿದರು.
ಜನ್ಮದಿನದ ವಿಶೇಷವಾಗಿ ಬೆಳಿಗ್ಗೆ ಸ್ಥಳೀಯ ಆಸ್ಪತ್ರೆಗೆ ತೆರಳಿದ ಅಭಿಮಾನಿಗಳು, ಅಲ್ಲಿನ ಒಳರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಿ ಸಾಂತ್ವನ ಹೇಳಿದರು. ಅರ್ಥಪೂರ್ಣ ಮತ್ತು ಸಾಮಾಜಿಕ ಕಾಳಜಿಯ ಕಾರ್ಯಕ್ರಮದ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಶುಭಕೋರಿದರು.
ಮನೆಯಲ್ಲಿ ಹರಿದುಬಂದ ಶುಭಾಶಯಗಳ ಹೊಳೆ
ಜನ್ಮದಿನದ ಅಂಗವಾಗಿ ಮನೆಯಲ್ಲಿದ್ದ ಶಶಿಧರ ಪೂಜಾರ ಅವರನ್ನು ಭೇಟಿಯಾದ ನೂರಾರು ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಅಭಿಮಾನಿಗಳು ಶುಭ ಹಾರೈಸಿದರು. ಅಭಿಮಾನಿಗಳು ಬೃಹತ್ ಕೇಕ್ ತಂದು ಶಶಿಧರ ಪೂಜಾರ ಅವರಿಂದ ಕತ್ತರಿಸಿ, ಪರಸ್ಪರ ಸಿಹಿ ಹಂಚಿ ಖುಷಿ ಹಂಚಿಕೊಂಡರು.
ಕಾರ್ಮಿಕ ಇಲಾಖೆ ನಿಗಮ ಮಂಡಳಿಯ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಶಶಿಧರ ಪೂಜಾರ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸ್ಥಾನಮಾನ, ಅಧಿಕಾರಗಳು ದೊರೆಯಲಿ ಎಂದು ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಮುಖಂಡರು ಆಶಿಸಿದರು.
Leave a comment