Home ಕೃಷಿ ರೇಷ್ಮೆ ಬೆಳೆಗಾರರಿಗೆ ಸಲಕರಣೆ, ಸ್ಮಾರ್ಟ್ ಕಾರ್ಡ್ ವಿತರಣೆ
ಕೃಷಿ

ರೇಷ್ಮೆ ಬೆಳೆಗಾರರಿಗೆ ಸಲಕರಣೆ, ಸ್ಮಾರ್ಟ್ ಕಾರ್ಡ್ ವಿತರಣೆ

Share
harapanahalli-silk-farmers-equipment-smart-card-distribution-latha-mallikarjun
Share

ಹರಪನಹಳ್ಳಿ : ತಾಲ್ಲೂಕಿನಲ್ಲಿ ರೇಷ್ಮೆ ಕೃಷಿ ಲಾಭದಾಯಕವಾಗಿ ಬೆಳೆಯುತ್ತಿದ್ದು, ಬೆಳೆಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.

ತಾಲ್ಲೂಕಿನ ರೇಷ್ಮೆ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರೇಷ್ಮೆ ಬೆಳೆಗಾರರಿಗೆ ಸಾಕಾಣಿಕೆ ಸಲಕರಣೆ ಹಾಗೂ ಸೋಂಕು ನಿವಾರಕಗಳನ್ನು ವಿತರಿಸಿ ಅವರು ಮಾತನಾಡಿದರು.

ರೇಷ್ಮೆ ಉಪನಿರ್ದೇಶಕ ಹರ್ಷ ಎಸ್.ಎ., ಮಾತನಾಡಿ, ಪ್ರಸ್ತುತ 1,050 ರೇಷ್ಮೆ ಬೆಳೆಗಾರರು ಇದ್ದು, ಸುಮಾರು 875 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಕೃಷಿ ವಿಸ್ತರಿಸಿದೆ. ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಗೂಡಿಗೆ ₹ 700 ರಿಂದ ₹ 800 ರವರೆಗೆ ಉತ್ತಮ ಧಾರಣೆ ಸಿಗುತ್ತಿರುವುದು ರೈತರಲ್ಲಿ ಉತ್ಸಾಹ ಮೂಡಿಸಿದೆ ಎಂದು  ಮಾಹಿತಿ ನೀಡಿದರು.

‘ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ’ ಯೋಜನೆಯಡಿ ಇ.ಬೇಬಿನಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಬಿ. ಬಸವರಾಜ ಸೇರಿ ಹಲವು ರೈತರಿಗೆ ಸ್ಮಾರ್ಟ್ ಕಾರ್ಡ್‌ ವಿತರಿಸಲಾಯಿತು. ತಾಲ್ಲೂಕು ರೇಷ್ಮೆ ನಿರೀಕ್ಷಕ ಕೆ. ನಾಗರಾಜ, ಸಿಬ್ಬಂದಿ ಎಚ್.ಎನ್. ಅಭಿಷೇಕ್, ಎಸ್. ಕುಮಾರಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ....

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ...

ಮೀನು ಗಾರಿಕೆ ಇಲಾಖೆ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.