ಹರಪನಹಳ್ಳಿ : ತಾಲ್ಲೂಕಿನಲ್ಲಿ ರೇಷ್ಮೆ ಕೃಷಿ ಲಾಭದಾಯಕವಾಗಿ ಬೆಳೆಯುತ್ತಿದ್ದು, ಬೆಳೆಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ತಿಳಿಸಿದರು.
ತಾಲ್ಲೂಕಿನ ರೇಷ್ಮೆ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ರೇಷ್ಮೆ ಬೆಳೆಗಾರರಿಗೆ ಸಾಕಾಣಿಕೆ ಸಲಕರಣೆ ಹಾಗೂ ಸೋಂಕು ನಿವಾರಕಗಳನ್ನು ವಿತರಿಸಿ ಅವರು ಮಾತನಾಡಿದರು.
ರೇಷ್ಮೆ ಉಪನಿರ್ದೇಶಕ ಹರ್ಷ ಎಸ್.ಎ., ಮಾತನಾಡಿ, ಪ್ರಸ್ತುತ 1,050 ರೇಷ್ಮೆ ಬೆಳೆಗಾರರು ಇದ್ದು, ಸುಮಾರು 875 ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಕೃಷಿ ವಿಸ್ತರಿಸಿದೆ. ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಗೂಡಿಗೆ ₹ 700 ರಿಂದ ₹ 800 ರವರೆಗೆ ಉತ್ತಮ ಧಾರಣೆ ಸಿಗುತ್ತಿರುವುದು ರೈತರಲ್ಲಿ ಉತ್ಸಾಹ ಮೂಡಿಸಿದೆ ಎಂದು ಮಾಹಿತಿ ನೀಡಿದರು.
‘ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ’ ಯೋಜನೆಯಡಿ ಇ.ಬೇಬಿನಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಬಿ. ಬಸವರಾಜ ಸೇರಿ ಹಲವು ರೈತರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ತಾಲ್ಲೂಕು ರೇಷ್ಮೆ ನಿರೀಕ್ಷಕ ಕೆ. ನಾಗರಾಜ, ಸಿಬ್ಬಂದಿ ಎಚ್.ಎನ್. ಅಭಿಷೇಕ್, ಎಸ್. ಕುಮಾರಸ್ವಾಮಿ ಹಾಗೂ ರೈತರು ಉಪಸ್ಥಿತರಿದ್ದರು.
Leave a comment