ಹರಪನಹಳ್ಳಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ತಾಲ್ಲೂಕನ್ನು ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಲೇಪಾಕ್ಷಪ್ಪ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ ಬಿಇಒ ಲೇಪಾಕ್ಷಪ್ಪ, ಇಸಿಒಗಳಾದ ವೀರೇಶ್, ಪಂಪನಾಯ್ಕ್ ಹಾಗೂ ಲತಾ ರಾಥೋಡ್ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್. ಜಿ.ಮನೋಹ, “ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಸಮನ್ವಯದ ಪರಿಶ್ರಮದಿಂದಾಗಿ ತಾಲ್ಲೂಕು ಜಿಲ್ಲಾ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಈ ಫಲಿತಾಂಶವು ಮುಂಬರುವ ವರ್ಷಗಳಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಇನ್ನಷ್ಟು ಬಲ ನೀಡಲಿದೆ” ಎಂದರು.
ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಿ. ಸೂರ್ಯ ನಾಯಕ್, ರಾಜ್ಯ ಪರಿಷತ್ ಸದಸ್ಯರಾದ ಷರೀಫ್ ಮಕರಬ್ಬಿ, ಮಂಜುನಾಥ್ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಕೆ. ಅಂಜಿನಪ್ಪ, ಪ್ರೌಢಶಾಲೆ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ಗುರುಮೂರ್ತಿ, ಸಾವಿತ್ರಿಬಾಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಟಿ.ಹೆಚ್.ಎಂ. ಲತಾ, ಶಾಲಾ ಶಿಕ್ಷಣ ಇಲಾಖೆ ಸಂಘದ ಅಧ್ಯಕ್ಷ ಎಲ್.ಹೆಚ್. ಗಿರಿರಾಜ್, ನೌಕರರ ಸಂಘದ ತಾಲ್ಲೂಕು ಉಪಾಧ್ಯಕ್ಷ ಸಂಗಯ್ಯ, ಶಶಿಕಲಾ ಉಪಸ್ಥಿತರಿದ್ದರು. ನಿರ್ದೇಶಕರಾದ ಎಸ್.ಶಫಿವುಲ್ಲಾ., ಶ್ರೀಕಾಂತ್, ನಿಂಗಪ್ಪ, ಮಲ್ಲಿಕಾರ್ಜುನ, ಅಶೋಕ್, ಕುಮಾರ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು ಈ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.
Leave a comment