Home ಶಿಕ್ಷಣ ಹರಪನಹಳ್ಳಿ: ನ್ಯಾಯಾಲಯದ ಆದೇಶ ಗೌರವಿಸಿದ ಶಿಕ್ಷಕ ಅಭ್ಯರ್ಥಿಗಳಿಗೆ ಸನ್ಮಾನ
ಶಿಕ್ಷಣಸುದ್ದಿಗಳು

ಹರಪನಹಳ್ಳಿ: ನ್ಯಾಯಾಲಯದ ಆದೇಶ ಗೌರವಿಸಿದ ಶಿಕ್ಷಕ ಅಭ್ಯರ್ಥಿಗಳಿಗೆ ಸನ್ಮಾನ

Share
Share

ಹರಪನಹಳ್ಳಿ: ನ್ಯಾಯಾಲಯದಲ್ಲಿ ಚುನಾವಣೆಗೆ ಮಧ್ಯಂತರ ತಡೆ ಆದೇಶ ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದ ಆದೇಶ ಪಾಲಿಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಿಂದ ಸ್ವಯಂಪ್ರೇರಿತರಾಗಿ ದೂರ ಉಳಿದ 22 ಅಭ್ಯರ್ಥಿಗಳನ್ನು ಅಭಿನಂದಿಸಿದ ಘಟನೆ ನಡೆಯಿತು.

ಶನಿವಾರ ಇಲ್ಲಿನ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಲಯದ ಆದೇಶ ಪಾಲಿಸಿ ಚುನಾವಣೆಯಿಂದ ದೂರ ಉಳಿದ ಈ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ವೆಂಕಟೇಶ್ ಮಾತನಾಡಿ, “ನ್ಯಾಯಾಲಯದ ಆದೇಶ ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಏ.30ರಂದೇ ತಡೆಯಾಜ್ಞೆ ಆದೇಶವಾಗಿದೆ. ಚುನಾವಣಾ ಅಧಿಕಾರಿಗಳು ಪಕ್ಷಪಾತ ಮಾಡದೇ ಆದೇಶದ ಪ್ರತಿ ಪರಿಶೀಲಿಸಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕಿತ್ತು. ಆದರೆ ಅವರು ಪಾಲಿಸದಿರುವುದು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದಂತೆ. ಆ ಚುನಾವಣಾ ಫಲಿತಾಂಶ ಸ್ವಯಂ ಘೋಷಿತ, ಅದು ಯಾವುದೇ ಅರ್ಹತೆ ಪಡೆಯುವುದಿಲ್ಲ,” ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಮಾತನಾಡಿ, ನಿಜವಾದ ಅರ್ಥದಲ್ಲಿ ನ್ಯಾಯಾಲಯದ ಆದೇಶ ಪಾಲಿಸಿದ ಅಭ್ಯರ್ಥಿಗಳೇ ಜಯಶಾಲಿಗಳು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್‍.ಜಿ.ಮನೋಹರ, ಕಾರ್ಯದರ್ಶಿ ಸೂರ್ಯನಾಯ್ಕ, ರಾಜ್ಯ ಪರಿಷತ್ ಸದಸ್ಯ ಮಕರಬ್ಬಿ ಷರೀಪ್, ಮಂಜುನಾಥ ಪೂಜಾರ, ಎ.ನಾಗೇಂದ್ರಪ್ಪ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಗುರುಮೂರ್ತಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಟಿ.ಎಚ್‍.ಎಂ. ಲತಾ, ಗಿರಿರಾಜ್, ಕೆ.ಅಂಜಿನಪ್ಪ, ಸುಬ್ಬಣ್ಣ, ಶಫಿ, ಉಸ್ಮಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.