ಹರಪನಹಳ್ಳಿ : 8ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಅಂಗವಾಗಿ ಹರಪನಹಳ್ಳಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಭರ್ಜರಿ ಸಿದ್ಧತೆ ನಡೆಸಲಾಗಿದೆ. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸಂಚರಿಸಿ, ಸಮಾಜವನ್ನು ಸಂಘಟಿಸಿ ಹಾಗೂ ಜಾಗೃತಿ ಮೂಡಿಸುವ ಮೂಲಕ ಒಟ್ಟು ರೂ. 5,40,833 ದೇಣಿಗೆ ಸಂಗ್ರಹಿಸಲಾಗಿದೆ.
ಈ ಬೃಹತ್ ಮೊತ್ತವನ್ನು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಯವರಿಗೆ ಸಮರ್ಪಿಸಿ, ಅಧಿಕೃತವಾಗಿ ರಶೀದಿ ಪಡೆಯಲಾಯಿತು.
8ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಅಧ್ಯಕ್ಷ ಆರ್. ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಹೆಚ್.ಕೆ. ಹಾಲೇಶ, ಕಾರ್ಯದರ್ಶಿ ಜಿಟ್ಟಿನಕಟ್ಟಿ ಹೆಚ್.ಕೆ. ಮಂಜುನಾಥ, ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ, ನಿವೃತ್ತ ಮುಖ್ಯ ಶಿಕ್ಷಕ ಎಸ್. ರೇವಣಸಿದ್ದಪ್ಪ, ಶಿಕ್ಷಕ ಎನ್.ಟಿ. ಸೋಮಪ್ಪ, ಎಸ್. ನಿಂಗಪ್ಪ, ಬೇಲೂರು ನಂಜಪ್ಪ, ಎಮ್. ಕರಿಬಸಪ್ಪ, ಯು. ಕೊಟ್ರೇಶ ಸೇರಿದಂತೆ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.
Leave a comment