Home ಸುದ್ದಿಗಳು ಹರಪನಹಳ್ಳಿ ವೀರಭದ್ರೇಶ್ವರ ರಥೋತ್ಸವ
ಸುದ್ದಿಗಳು

ಹರಪನಹಳ್ಳಿ ವೀರಭದ್ರೇಶ್ವರ ರಥೋತ್ಸವ

Share
harapanahalli-veerabadreshwara
harapanahalli-veerabadreshwara
Share

ಹರಪನಹಳ್ಳಿ : ನಗರದ ಹಳೇ ಬಸ್ ನಿಲ್ದಾಣದಲ್ಲಿ ಸಾರಿಬಯಲು ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಗೌರಿ ಹುಣ್ಣಿಮೆ ದಿನ ಬುಧವಾರ ಸಂಜೆ 6.23ಕ್ಕೆ ಸಡಗರ, ಸಂಭ್ರಮದಿಂದ ನೆರವೇರಿತು.

ಬೆಳಿಗ್ಗೆ ದೇವಸ್ಥಾನದ ಆವರಣದಲ್ಲಿ ಬ್ರಹ್ಮ ರಥೋತ್ಸವ ಜರುಗಿತು. ಸಂಜೆ ಮೇಗಳಪೇಟೆ ವೀರಭದ್ರ ದೇವಸ್ಥಾನದಲ್ಲಿರುವ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ಮೆರವಣಿಗೆ ಮೂಲಕ ಹಳೇ ಬಸ್ ನಿಲ್ದಾಣದಲ್ಲಿರುವ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸಕಲ ಪುಷ್ಪಗಳಿಂದ ಅಲಂಕರಿಸಿದ ರಥದ ಬಳಿ ಆಗಮಿಸಿ ಭಕ್ತಿ ಭಾವದಿಂದ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಸಮ್ಮಾಳ, ನಂದಿಕೋಲು ಬಾಜ ಭಜಂತ್ರಿಗಳು ಮೆರವಣಿಗೆಗೆ ಮೆರುಗು ನೀಡಿದವು.

ಸಮ್ಮಾಳ ಕಲಾವಿದರು ವೀರಭದ್ರ ದೇವರ ಕುರಿತಾದ ಒಡಪು ಪ್ರದರ್ಶಿಸಿ ರಥೋತ್ಸವದ ದಿನ ಆಕರ್ಷಿಸಿದರು. ಭಕ್ತರಾದ ಗುರುಬಸವರಾಜ್ ಅವರು ವೀರಭದ್ರ ಸ್ವಾಮಿ ಧ್ವಜವನ್ನು ₹.1.10 ಲಕ್ಷಕ್ಕೆ ಹರಾಜಿನಲ್ಲಿ ಪಡೆದರು. ಬಳಿಕ ರಥಕ್ಕೆ ಚಾಲನೆ ನೀಡಲಾಯಿತು. ಧರ್ಮಕರ್ತ ಪಾಟೀಲ್ ಪ್ರವೀಣ್ ಕುಮಾರ, ಅರ್ಚಕರು, ಪುರವಂತರು, ಸಮ್ಮಾಳ ಕಲಾವಿದರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.