Home ಅಪರಾಧ ಹರಪನಹಳ್ಳಿ :  ಮನೆಗೆಲಸ ಮಾಡುತ್ತಿದ್ದ ಮಹಿಳೆ ಬಂಧನ
ಅಪರಾಧ

ಹರಪನಹಳ್ಳಿ :  ಮನೆಗೆಲಸ ಮಾಡುತ್ತಿದ್ದ ಮಹಿಳೆ ಬಂಧನ

Share
Share

ಹರಪನಹಳ್ಳಿ : ತಾನು ಕೆಲಸ ಮಾಡುತ್ತಿದ್ದ ಶಿಕ್ಷಕಿಯರ ಮನೆಯಲ್ಲಿ ಕಳ್ಳತನ ಮಾಡಿರುವ ಆರೋಪದ ಮೇಲೆ ಮನೆಗೆಲಸ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಹರಪನಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಾಯಕದಹಳ್ಳಿ ಗ್ರಾಮದ ಮಣಿಗೇರ ಸಂಗೀತಾ (35) ಹಾಗೂ ಜಿ.ವೆಂಕಟೇಶ (30) ಬಂಧಿತರು. ಅವರ ಬಳಿಯಿದ್ದ ರೂ. 18.60 ಲಕ್ಷ ಮೌಲ್ಯದ ಬಂಗಾರದ ಆಭರಣ, ಮತ್ತೊಬ್ಬ ಶಿಕ್ಷಕಿ ಮನೆಯಲ್ಲಿ ಕಳ್ಳತನ ಮಾಡಿದ್ದ  ರೂ. 3 ಲಕ್ಷ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿಯ ಆಭರಣ, ಪ್ರಕರಣಕ್ಕೆ ಬಳಸಿದ್ದ ಆಟೊ ಸೇರಿ ಒಟ್ಟು ರೂ. 22.60 ಲಕ್ಷ ಮೌಲ್ಯದ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.

ಹರಪನಹಳ್ಳಿ :  ಮನೆಗೆಲಸ ಮಾಡುತ್ತಿದ್ದ ಮಹಿಳೆ ಬಂಧನ

ಬಾಣಗೇರಿಯಲ್ಲಿ ಶಿಕ್ಷಕಿ ಬಿ.ಶಹಾನಾಜ್ ಬೇಗಂ ಅವರು ಡಿ.30ರಂದು ಬೆಳಿಗ್ಗೆ ಕೆಲಸಕ್ಕೆಂದು ಶಾಲೆಗೆ ತೆರಳಿದ್ದಾಗ ಮನೆಗೆ ನುಗ್ಗಿದ ಆರೋಪಿಗಳು ಕದ್ದು ಪರಾರಿಯಾಗಿದ್ದರು. ಅ.21ರಂದು ಜೋಯಿಸರಕೇರಿ ಮತ್ತೊರ್ವ ಶಿಕ್ಷಕಿ ಎಚ್.ವೀರಮ್ಮ ಅವರ ಮನೆಯಲ್ಲಿ ರೂ. 3 ಲಕ್ಷ ಮೌಲ್ಯದ ಕಳ್ಳತನ ಆಗಿತ್ತು.

ಮಾಲೀಕರ ಹೇಳಿಕೆ ಆಧರಿಸಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಶಂಕೆ ವ್ಯಕ್ತಪಡಿಸಿದ್ದ ಪೊಲೀಸರು, ಪ್ರಕರಣದ ಬೆನ್ನತ್ತಿ, ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ತಂಡದಲ್ಲಿದ್ದ ಡಿವೈಎಸ್ಪಿ ಸಂತೋಷ ಚೌವ್ಹಾಣ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್‍ಐ ಶಂಭುಲಿಂಗ ಹಿರೇಮಠ, ಬಿ,.ಮೀನಾಕ್ಷಿ, ಸಿಬ್ಬಂದಿ ಆನಂದ, ರವಿ ದಾದಾಪುರ, ಮಾಲತೇಶ ಬಿಳಿಚೋಡು, ಯು.ನಾಗರಾಜ್, ವಾಸುದೇವ ನಾಯ್ಕ, ಸಿದ್ದಿ ಮುಬಾರಕ್, ಯರ್ರಿಸ್ವಾಮಿ, ವಸಂತಕುಮಾರ, ನಾರನಗೌಡ, ಜಗದೀಶ, ಮಾಬು ಸಾಹೇಬ, ಗುರುಪ್ರಸಾದ್. ಇಮಾಮ್ ಸಾಹೇಬ್ , ಸಿಡಿಆರ್ ವಿಭಾಗದ ಕುಮಾರನಾಯ್ಕ, ಜೀಪ್ ಚಾಲಕ ಇಮಾಮ್ ಸಾಹೇಬ್, ನಾಗರಾಜ್ ನಾಯ್ಕ ಅವರುಗಳ ಕಾರ್ಯಕ್ಕೆ ಎಸ್ಪಿ ಜಾಹ್ನವಿ ಎಸ್‍, ಹೆಚ್ಚುವರಿ ಎಸ್ಪಿ ಜಿ.ಮಂಜುನಾಥ  ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
shri ganda
ಅಪರಾಧ

ಯರಬಾಳು : ಶ್ರೀಗಂಧದ ಮರ ಕಳವು

ಹರಪನಹಳ್ಳಿ: ತಾಲ್ಲೂಕಿನ ತೆಲಿಗಿ ಹೋಬಳಿಯ ಯರಬಾಳು ಗ್ರಾಮದ ರೈತರೊಬ್ಬರ ತೋಟದಲ್ಲಿ ಸುಮಾರು 20 ವರ್ಷಗಳಿಂದ ಬೆಳೆಸಲಾಗಿದ್ದ...

ravi
Homeಅಪರಾಧ

 ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  

ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ...

crime harapanahalli
ಅಪರಾಧ

ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ

ಹರಪನಹಳ್ಳಿ : ನಗರದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ನಿವಾಸದ...

ARSIKERE POLICE
ಅಪರಾಧ

ಅರಸೀಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಬೈಕ್ ವಶ, ಮೂವರು ಕಳ್ಳರ ಬಂಧನ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಪೊಲೀಸರು ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಗ್ಯಾಂಗ್ ಅನ್ನು ಬೇಟೆಯಾಡಿದ್ದಾರೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.