Home ರಾಜಕೀಯ ಹೊಸಕೋಟೆ ಗ್ರಾಪಂ ಅಧ್ಯಕ್ಷರಾಗಿ ನಾಗಪ್ಪ ಅವಿರೋಧ ಆಯ್ಕೆ
ರಾಜಕೀಯ

ಹೊಸಕೋಟೆ ಗ್ರಾಪಂ ಅಧ್ಯಕ್ಷರಾಗಿ ನಾಗಪ್ಪ ಅವಿರೋಧ ಆಯ್ಕೆ

Share
Hosakote-gp-President
ಹರಪನಹಳ್ಳಿ ತಾಲ್ಲೂಕು ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗಪ್ಪ ಅವಿರೋಧ ಆಯ್ಕೆಯಾದರು, ಮುಖಂಡರನ್ನು ಅಬಿನಂಧಿಸಲಾಯಿತು.
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಹೋಬಳಿ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಡಿ.ನಾಗಪ್ಪ ಅವರು ಮಂಗಳವಾರ ನಡೆದ ಆಯ್ಕೆಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 14 ಜನ ಸದಸ್ಯ ಬಲ ಹೊಂದಿದೆ. ಹಿಂದಿನ ಅಧ್ಯಕ್ಷೆ ಬಿ.ರೇಣುಕಮ್ಮ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನ ಬಯಸಿ ಡಿ.ನಾಗಪ್ಪ ಅವರೊಬ್ಬರೆ ನಾಮಪತ್ರ ಸಲ್ಲಿಸಿದ್ದರು. ಸಭೆಯಲ್ಲಿ 11 ಜನ ಸದಸ್ಯರು ಹಾಜರಿದ್ದರು. ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಘೋಷಿಸಿದರು. ಬಳಿಕ ಕಾರ್ಯಕರ್ತರು ಸಂಭ್ರಮಾಚರಿಸಿದರು. ನೂತನ ಅಧ್ಯಕ್ಷ ನಾಗಪ್ಪ ಮಾತನಾಡಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಿಗೆ ಕುಡಿಯುವ ನೀರು ಕಲ್ಪಿಸುವುದು, ಸ್ವಚ್ಚತೆ, ಬೀದಿ ದೀಪದ ವ್ಯವಸ್ಥೆಗೆ ಆಧ್ಯತೆ ನೀಡಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹೇಮಂತ್, ಉಪಾಧ್ಯಕ್ಷೆ ಕವಿತಾ ವೀರೇಶ್, ಸದಸ್ಯರಾದ ಮಂಜಮ್ಮ ಆನಂದಪ್ಪ, ಜಯ್ಯಮ್ಮ ಕೃಷ್ಣಪ್ಪ, ಬಸಮ್ಮ ಲೋಕಪ್ಪ, ಗೌರಮ್ಮ ಜಗದೀಶ್, ಆರ್. ಆಶಾ ಅಣ್ಣಪ್ಪ, ಕೆಂಚಪ್ಪ, ಜಿ. ಅಮರೇಶ್, ಟಿ.ಪಾಂಡುರಂಗಪ್ಪ, ಡಿ.ಶ್ರೀನಿವಾಸ್, ಕೆ. ಎನ್. ಸಿದ್ದೇಶ್, ಹೆಚ್. ಕರಿಬಸಪ್ಪ, ಮುಖಂಡರಾದ ಚಿಕ್ಕಕಬ್ಬಳ್ಳಿ ಕೊಟ್ರೇಶ್, ಪರುಸಪ್ಪ, ರಮೇಶ್, ಸುರೇಶ್ ಗೌಡ, ಚಂದ್ರುಗೌಡ, ಆಲೂರು ಶ್ರೀನಿವಾಸ,  ಕೋಣನಕಟ್ಟೆ ಅಣ್ಣಪ್ಪ, ಹೊಸಕೋಟೆ ಆನಂದಪ್ಪ,ಎಂ.ಮಲ್ಲೇಶ್,ನಿವೃತ್ತ ಶಿಕ್ಷಕ  ಶರಣಪ್ಪ,ಜಾತಪ್ಪ, ಹೆಚ್. ರಾಮಣ್ಣ, ಸಿದ್ದಲಿಂಗನಗೌಡ, ಕೆರೆಗುಡಿಹಳ್ಳಿ ಅಜ್ಜಪ್ಪ, ವೀರೇಶ್, ಪರಮೇಶ್, ಕಲ್ಲಪ್ಪ, ಸಿದ್ದಲಿಂಗಪ್ಪ, ಡಿ. ಬಸವರಾಜಪ್ಪ, ಕೆರೆಗುಡಿಹಳ್ಳಿ ಪೂಜಾರಿ ದುರುಗಪ್ಪ, ನಾಗರಾಜ್,ಭೋವಿ ಕೆಂಗಣ್ಣ, ಆಲೂರು ಶ್ರೀನಿವಾಸ್, ದ್ಯಾವಜ್ಜಿ ಉಚ್ಚಂಗೆಪ್ಪ, ಮ್ಯಾಸಗೇರಿ ವೆಂಕಟೇಶ ಹಾಗೂ ಗ್ರಾಮಸ್ಥರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeರಾಜಕೀಯ

ಆಡಳಿತಾಧಿಕಾರಿ ನೇಮಿಸಲು ಒತ್ತಾಯ

ಹರಪನಹಳ್ಳಿ : ನಗರದ ಪ್ರಸಿದ್ಧ ಶ್ರೀ ಕೋಟೆ ಆಂಜನೇಯ ದೇವಸ್ಥಾನಕ್ಕೆ  ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.