Home ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

Share
Share

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವ ಶಕ್ತಿ ಕೇಂದ್ರಗಳಾಗಿವೆ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಅಡವಿಹಳ್ಳಿ ಗ್ರಾಮದಲ್ಲಿ ಸೋಮಾರ ಹಮ್ಮಿಕೊಂಡಿದ್ದ ಉಜ್ಜಯಿನಿ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಹಾಗೂ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಗೋಪುರದ ಮೇಲಿರುವ ಕಳಸವು ದೇವಸ್ಥಾನದ ಪವಿತ್ರ ಶಕ್ತಿಯ ಸಂಕೇತ. ಭಗವಂತನ ದಿವ್ಯ ಶಕ್ತಿಯು ಈ ಕಳಸದ ಮೂಲಕ ಇಡೀ ಊರಿಗೆ ಹರಡುತ್ತದೆ ಮತ್ತು ಪ್ರಕೃತಿಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗ್ರಾಮಸ್ಥರು ಪ್ರತಿದಿನ ದೇವರ ಸ್ಮರಣೆ ಮಾಡಬೇಕು. ಭಗವಂತನನ್ನು ಅರಿತಾಗ ಮಾತ್ರ ಅರಿವಿನ ನಿಜವಾದ ಜ್ಞಾನ ಉಂಟಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಅಡವಿಹಳ್ಳಿಯ ಸದ್ಗುರು ಶಿವಯೋಗಿ ವೀರ ಗಂಗಾಧರ ಹಾಲಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ರಾಜ್ಯ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ, ದೇವಸ್ಥಾನ ಸಮಿತಿ ಅಧ್ಯಕ್ಷ ಎ.ಜೆ.ಮಂಜುನಾಥ ಗೌಡ, ಉಪಾಧ್ಯಕ್ಷ ಹಾವನೂರು ಹಾಲಪ್ಪ, ಮಲ್ಲಿಕಾರ್ಜುನ ಕಲ್ಮಠ, ಕರಿಬಸವರಾಜ, ಓಂಕಾರಗೌಡ, ಸುರೇಶ, ಪಿ.ಅರುಣ್ ಕುಮಾರ, ಪ್ರಧಾನ ಕಾರ್ಯದರ್ಶಿ ಗುಬ್ಬವ್ವರ ಪೂಜಾರ್ ಬಸವರಾಜ, ಖಜಾಂಚಿ ಬಿ.ಜಿ. ಶರಣಪ್ಪ, ಸಹ ಕಾರ್ಯದರ್ಶಿ ನಿಂಬಳಗೇರಿ ಬಸವರಾಜ ಇದ್ದರು.

 

 

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.