Home ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’
Homeಸುದ್ದಿಗಳು

ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’

Share
ಪತ್ರಕರ್ತ ಕೆ. ಉಚ್ಚೆಂಗೆಪ್ಪ
Share

ಹರಪನಹಳ್ಳಿ :  ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’ಗೆ (2026) ಆಯ್ಕೆ ಮಾಡಿದೆ.

ಕಳೆದ 30 ವರ್ಷಗಳಿಂದ ಜನತಾವಾಣಿ, ಹೊಸದಿಗಂತ, ಪ್ರಜಾ ಪ್ರಗತಿ ಹಾಗೂ ವಿಸ್ತಾರ ನ್ಯೂಸ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಅವರು ತಮ್ಮ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ. ಇವರ ಈ ಬಹುಮುಖಿ ಸೇವೆಯನ್ನು ಗುರುತಿಸಿ, 2025ನೇ ಸಾಲಿನ ರಾಜ್ಯ ಸರ್ಕಾರದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ಕೂಡ ಇವರಿಗೆ ಒಲಿದು ಬಂದಿತ್ತು.

ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿಗೆ ಭಾಜನಾಗಿರುವ  ಕೆ.ಉಚ್ಚೆಂಗೆಪ್ಪ ನವರಿಗೆ   ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೆಶಕ ವೈ.ಡಿ.ಅಣ್ಣಪ್ಪ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಕೆ.ಹಾಲೇಶ, ದಾವಣಗೆರೆಯ ಶ್ರೀನಿವಾಸ ದಾಸಕರಿಯಪ್ಪ, ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ. ಬಿ.ವೀರಣ್ಣ, ಪ್ರಗತಿಪರ ಮುಖಂಡ ಕೋಡಿಹಳ್ಳಿ ಭೀಮಪ್ಪ, ಕಾರ್ಯನಿರತ ಪತ್ರಕರ್ತರ ಸಮಿತಿ ಅಧ್ಯಕ್ಷ. ಎ.ನಾಗೇಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರುಗಳಾದ ಡಿ.ರಾಮನಮಲಿ.ಸುಭದ್ರಮ್ಮ ಮಾಡ್ಲಿಗೇರಿ, ಸಾಹಿತಿಗಳಾದ ಇಸ್ಮಾಯಿಲ್ ಎಲಿಗಾರ್ , ನ್ಯಾಯವಾದಿ ಕೋಡಿಹಳ್ಳಿ ಪ್ರಕಾಶ, ಕೋಡಿಹಳ್ಳಿಯ ಡಾ.ಬಸವರಾಜ ಪೂಜಾರ್ ಸೇರಿದಂತೆ ಇತರರು ಶುಭ ಹಾರೈಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.