Home ಕಣಿವಿಹಳ್ಳಿ : ದಲಿತ ಸಮುದಾಯಗಳ ಹೋರಾಟ
Homeಸುದ್ದಿಗಳು

ಕಣಿವಿಹಳ್ಳಿ : ದಲಿತ ಸಮುದಾಯಗಳ ಹೋರಾಟ

Share
ಕಣಿವಿಹಳ್ಳಿ : ದಲಿತ ಸಮುದಾಯಗಳ ಹೋರಾಟ
Share

ಹರಪನಹಳ್ಳಿ : ತಾಲ್ಲೂಕಿನ ಕಣಿವಿಹಳ್ಳಿ ಗ್ರಾಮದಲ್ಲಿ 220 ಕೆ.ವಿ. ಒಂಟಿ ವಿದ್ಯುತ್ ಗೋಪುರವನ್ನು ಸ್ಥಳಾಂತರಿಸಬೇಕು ಹಾಗೂ ಹೊಸ ಗೋಪುರ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಬುಧವಾರ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಒತ್ತಾಯಿಸಿದರು.

ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಆಗಮಿಸಿದ್ದ ಗ್ರಾಮದ ಪರಿಶಿಷ್ಟ ಸಮುದಾಯದವರು ಹೊಸ ಗೋಪುರ ನಿರ್ಮಾಣಕ್ಕೆ ಯಾವುದೇ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು. ದಲಿತ ಮುಖಂಡ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, ಕಣಿವಿಹಳ್ಳಿಯಲ್ಲಿ ಪರಿಶಿಷ್ಟ ಸಮುದಾಯದ 60ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. 1978ನೇ ಇಸ್ವಿಹಳ್ಳಿ ಕೊಪ್ಪಳದ ಲಿಂಗಾಪುರದಿಂದ ಹರಿಹರದ ಗುತ್ತೂರು ವಿದ್ಯುತ್ ಸ್ವೀಕರಣ ಕೇಂದ್ರಕ್ಕೆ 220 ಕೆ.ವಿ. ಹೈ ವೋಲ್ಟೋಜ್ ವಿದ್ಯುತ್ ತಂತಿ ನಿರ್ಮಿಸಲಾಗಿದೆ. ಆದರೆ ನಮ್ಮ ಗ್ರಾಮದಲ್ಲಿ ಸರ್ಕಾರ ನಮಗಾಗಿ ವಸತಿ ನಿರ್ಮಾಣಕ್ಕಾಗಿ ಸರ್ವೆ ನಂಬರ್ 106.ಬಿರಲ್ಲಿ 1 ಎಕರೆ 57 ಸೆಂಟ್ಸ್ ಭೂಮಿಯನ್ನು ಖಾಸಗಿವ್ಯಕ್ತಿಯಿಂದ ಸರ್ಕಾರವು ಸ್ವಾಧೀನಪಡಿಸಿಕೊಂಡು ನಮ್ಮ ಕಾಲೊನಿಯ 60 ದಲಿತ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ಹಕ್ಕುಪತ್ರ ಕೊಟ್ಟಿದೆ ಎಂದರು.

ಇದನ್ನು ಲೆಕ್ಕಿಸದ ಕೆಪಿಟಿಸಿಎಲ್‍ ಅಧಿಕಾರಿಗಳು ಭೂ ಪರಿವರ್ತನೆ ಮಾಡಿಕೊಂಡು, ಅಲ್ಲಿ ವಾಸ ಮಾಡುತ್ತಿರುವ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಹೊರಟಿದ್ದಾರೆ. ಹೈ  ವೋಲ್ಟೆಜ್‍ ವಿದ್ಯುತ್ ಪ್ರಸಾರದ ಪರಿಣಾಮ ಮನೆಯ ಟಿ.ವಿ. ಎಲೆಕ್ಟ್ರಿಕಲ್ ಬಲ್ಬ್‍ ಗಳು ಸುಟ್ಟು ಹೋಗುತ್ತಿವೆ. ಇದು ಪ್ರತಿ ವರ್ಷ ನಿರಂತರವಾಗಿ ನಡೆದುಕೊಂಡು ಬಂದಿರುತ್ತದೆ. ಇದು ಗ್ರಾಮದ 100ಕ್ಕೂ ಹೆಚ್ಚು ದಲಿತರ ಜೀವದ ಜೊತೆ ಚೆಲ್ಲಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಪ್ರಕರಣ ನ್ಯಾಯಾಲಯದಲ್ಲಿದೆ, ಆದರೂ ಅಧಿಕಾರಿಗಳು ಆದೇಶಕ್ಕೂ ಮುನ್ನವೇ ಕಾಮಗಾರಿ ಮಾಡಲು ಹೊರಟಿರುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಜಾರಿ ನಿರ್ದೇಶನಾಲಯ, ಮಾನವ ಹಕ್ಕುಗಳ ಆಯೋಗ, ರಾಜ್ಯ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಆಯೋಗಕ್ಕೂ ದೂರು ಸಲ್ಲಿಸಲಾಗಿದೆ. ದಲಿತರಿಗೆ ನ್ಯಾಯ ಕೊಡಬೇಕು, ವಿದ್ಯುತ್ ಗೋಪುರಗಳನ್ನು ಬೇರೆಡೆ ಸ್ಥಳಾಂತರಿಸುವ ತನಕ, ನಮ್ಮ ಕಾನೂನು ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇಟ್ಟಿಗಿ ಸುಮಾ, ಹುಚ್ಚಪ್ಪ, ಕಾಳಪ್ಪ, ಹನುಮಪ್ಪ, ಗೋಣಿಸ್ವಾಮಿ, ಮಲ್ಲಿಕಾರ್ಜುನ, ಜುಂಜಪ್ಪ, ಅನ್ನಪೂರ್ಣ, ಎಸ್.ಕವಿತಾ, ನಾಗರಾಜ್, ಮಮತ, ಶ್ರವಣಕುಮಾರ, ಹನುಮಂತಪ್ಪ, ಎಸ್.ನಿಂಗಪ್ಪ, ಮಂಜುನಾಥ, ಯರಿಯಮ್ಮ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.