Home ಸುದ್ದಿಗಳು  ಸಮ್ಮೇಳನಗಳು ರೈತರು, ಶೋಷಿತರ ಧ್ವನಿಯಾಗಬೇಕು:  ಹೆಚ್.ಎಂ. ಸಂತೋಷ್
ಸುದ್ದಿಗಳು

 ಸಮ್ಮೇಳನಗಳು ರೈತರು, ಶೋಷಿತರ ಧ್ವನಿಯಾಗಬೇಕು:  ಹೆಚ್.ಎಂ. ಸಂತೋಷ್

Share
ಕೆರೆಗುಡಿಹಳ್ಳಿಯಲ್ಲಿ ಅಖಿಲ ಭಾರತ ಕಿಸಾನ್ ಸಭಾ ತಾಲ್ಲೂಕು ಸಮ್ಮೇಳನ
Share

ಹರಪನಹಳ್ಳಿ  : ತಾಲ್ಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಅಖಿಲ ಭಾರತ ಕಿಸಾನ್ ಸಭಾದ 6ನೇ ತಾಲ್ಲೂಕು ಸಮ್ಮೇಳನ ಸೋಮವಾರ ಯಶಸ್ವಿಯಾಗಿ ಜರುಗಿತು. ಸಮ್ಮೇಳನದಲ್ಲಿ ರೈತರ ಸಮಸ್ಯೆಗಳು, ಬಗರ್ ಹುಕುಂ ಸಾಗುವಳಿದಾರರ ಹಕ್ಕುಗಳು ಹಾಗೂ ಮುಂದಿನ ಹೋರಾಟಗಳ ರೂಪುರೇಷೆಗಳ ಬಗ್ಗೆ ಗಂಭೀರ ಚರ್ಚೆ ನಡೆಯಿತು.

ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ. ಸಂತೋಷ್ ಮಾತನಾಡಿ, ಸಮ್ಮೇಳನಗಳು ಕೇವಲ ಸಾಂಕೇತಿಕವಾಗಿರದೆ ರೈತರು, ಬಡವರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ದೀನ ದಲಿತರ ಕ್ರಾಂತಿಕಾರಿ ಧ್ವನಿಯಾಗಬೇಕು ಎಂದರು.

ಉದ್ಘಾಟಿಸಿದ ಸಿಪಿಐ ತಾಲ್ಲೂಕು ಕಾರ್ಯದರ್ಶಿ ರಮೇಶ್ ನಾಯ್ಕ್  ಮಾತನಾಡಿ,  ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ, ನೀರಾವರಿ ಯೋಜನೆಗಳು ಜಾರಿಯಾಗಿಲ್ಲ ಮತ್ತು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸದ ಸರ್ಕಾರದ ನಿರ್ಲಕ್ಷ್ಯ ವಿರುದ್ದ ಜನಜಾಗೃತಿ ಮೂಡಿಸಿ, ಹಂತ ಹಂತವಾಗಿ ಹೋರಾಟ ರೂಪಿಸುವ ಅಗತ್ಯವಿದೆ ಎಂದರು.

ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಮಾತನಾಡಿ,  ‘1936ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ಹುಟ್ಟಿಕೊಂಡ ಕಿಸಾನ್ ಸಭಾ, ‘ಉಳುವವನೇ ಭೂಮಿಯ ಒಡೆಯ’ ಎಂಬ ಧ್ಯೇಯದೊಂದಿಗೆ ಕಳೆದ ಮೂರು ದಶಕಗಳಿಂದ ಬೆಂಬಲ ಬೆಲೆ, ಪರಿಹಾರ ಮತ್ತು ಭೂಸ್ವಾಧೀನದ ವಿರುದ್ಧ ಸತತ ಹೋರಾಟ ಮಾಡಿಕೊಂಡು ಬರುತ್ತಿದೆ’ ಎಂದರು. ಇದೇ ವೇಳೆ ಕಾರ್ಮಿಕ, ರೈತ, ದಲಿತಪರ ಸಂಘಟನೆಗಳ ಮುಖಂಡರನ್ನು ಸನ್ಮಾನಿಸಲಾಯಿತು. ಇಪ್ಟಾ ಕಲಾವಿದ ಎ.ಡಿ.ದ್ವಾರಕೀಶ್ ಕ್ರಾಂತಿಗೀತೆ ಹಾಡಿದರು.

ಕಾರ್ಮಿಕ ಮುಖಂಡ ಹೊಸಹಳ್ಳಿ ಮಲ್ಲೇಶ್, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೂದಿಹಾಳು ಸಿದ್ದಣ್ಣ, ಡಿಎಸ್ಎಸ್ ಮುಖಂಡ ಕಬ್ಬಳ್ಳಿ ಮೈಲಪ್ಪ ಮಾತನಾಡಿದರು. ಮುಖಂಡರಾದ ಬಳಿಗನೂರು ಕೊಟ್ರೇಶ್, ಹೆಚ್. ಹಾಲಪ್ಪ, ಎ.ಬಿ. ನಾಗರಾಜ್ ಗೌಡ, ಟಿ. ಬಸಮ್ಮ, ವಿಶಾಲಮ್ಮ, ದೇವಿಕಾ, ಕರಿಬಸಮ್ಮ  ಇದ್ದರು.

ಎಐಕೆಎಸ್‌ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ 

  • ಗೌರವಾಧ್ಯಕ್ಷರು: ರಾಗಿ ಮಸಲವಾಡದ ಹನುಮಂತಪ್ಪ
  • ಅಧ್ಯಕ್ಷರು: ಹನುಮಂತ ನಾಯ್ಕ್
  • ಉಪಾಧ್ಯಕ್ಷರು: ಬೊಮ್ಮಲಿಂಗಪ್ಪ
  • ಪ್ರಧಾನ ಕಾರ್ಯದರ್ಶಿ: ಶಿವರಾಮ್
  • ಸಹ ಕಾರ್ಯದರ್ಶಿ: ಹರಿಯಮ್ಮನಹಳ್ಳಿ ಬಸವರಾಜ್
  • ತಾಲೂಕು ಸಮಿತಿ ಸದಸ್ಯರು: ಮತ್ತಿಹಳ್ಳಿ ಭರಮಪ್ಪ, ಶಿವಕುಮಾರ್, ಚಿದಾನಂದಪ್ಪ, ಬೊಮ್ಮಪ್ಪ, ಬಸವರಾಜ್.
  • ಗಣ್ಯರ ಉಪಸ್ಥಿತಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೂದಿಹಾಳು ಸಿದ್ದಣ್ಣ, ಡಿಎಸ್ಎಸ್ ಮುಖಂಡ ಕಬ್ಬಳ್ಳಿ ಮೈಲಪ್ಪ, ಹೊಸಹಳ್ಳಿ ಮಲ್ಲೇಶ್ ಮಾತನಾಡಿದರು. ಮುಖಂಡರಾದ ಬೊಮ್ಮಲಿಂಗಪ್ಪ, ಹನುಮಂತನಾಯ್ಕ್, ಶಿವರಾಮ್, ಬಳಿಗನೂರು ಕೊಟ್ರೇಶ್, ಹೆಚ್. ಹಾಲಪ್ಪ, ಎ.ಬಿ. ನಾಗರಾಜ್ ಗೌಡ, ಟಿ. ಬಸಮ್ಮ, ವಿಶಾಲಮ್ಮ, ದೇವಿಕಾ, ಕರಿಬಸಮ್ಮ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಾರಕೀಶ್ ಅವರು ಕ್ರಾಂತಿಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.