ಹರಪನಹಳ್ಳಿ : ಕಬ್ಬಡ್ಡಿ ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂದು ಹರಪನಹಳ್ಳಿ ಕಾಂಗ್ರೆಸ್ ಪಕ್ಷದ ಮುಖಂಡ ಕೋಡಿಹಳ್ಳಿ ಭೀಮಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕಿನ ಶಾಂತಿನಗರದಲ್ಲಿ ಸೇವಾಲಾಲ್ ಅಂಬೇಡ್ಕರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು. ಇಂತಹ ದೇಸಿ ಕ್ರೀಡೆಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್ ವಕೀಲ ಅನಂತನಾಯ್ಕ ಮಾತನಾಡಿ, ಸಂವಿಧಾನ ಶಿಲ್ಪಿ ಡಾ,ಬಿ,ಆರ್.ಅಂಬೇಡ್ಕರ ನಮ್ಮೆಲ್ಲರಿಗೂ ಸ್ಪೂರ್ತಿ ತುಂಬಿದ್ದಾರೆ. ಅವರ ತತ್ವಾದರ್ಶ ಪಾಲಿಸುತ್ತಾ ನಾವೆಲ್ಲರೂ ಜೀವನ ರೂಪಿಸಿಕೊಳ್ಳಬೇಕು. ಕಬ್ಬಡ್ಡಿ ದೇಸಿ ಆಟ ಉಳಿಸಿ, ಬೆಳೆಸುವ ಕೆಲಸ ಆಗಬೇಕು ಎಂದರು.
ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಕೆ.ಉಚ್ಚೆಂಗೆಪ್ಪ ಮಾತನಾಡಿ, ವಿದ್ಯಾರ್ಥಿ ಯುವಜನತೆ ಉತ್ತಮ ಶಿಕ್ಷಣ ಪಡೆಯುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರದ ಅಭಿರುಚಿ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ದಾವಣಗೆರೆ ರಂಗಾಯಾಣ ನಿರ್ದೆಶಕ ಮಲ್ಲಿಕಾರ್ಜುನ ಕಡಕೋಳ್, ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಲ್ .ಪ್ರಕಾಶ ನಾಯ್ಕ, ಮುಖಂಡರಾದ ಉಮೇಶನಾಯ್ಕ, ನೇಮಿರಾಜನಾಯ್ಕ, ಗಣೇಶನಾಯ್ಕ, ಪರುಶುರಾಮ, ಎಂ.ಕೆಂಚಪ್ಪ, ಶೇಖರನಾಯ್ಕ, ಧರ್ಮಪ್ಪ, ಭೋಜ್ಯನಾಯ್ಕ, ತೀರ್ಪುಗಾರರಾದ ಜಗದೀಶ. ನಾಗರಾಜ ಇದ್ದರು.
Leave a comment