ಹರಪನಹಳ್ಳಿ : ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಫೆಬ್ರವರಿ 26 ರಿಂದ 28ರವರೆಗೆ ನಡೆಯಲಿರುವ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಪ್ರಯುಕ್ತ ಮದ್ಯ ಮಾರಾಟ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜಾತ್ರೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 1 ರ ಬೆಳಿಗ್ಗೆ 6 ಗಂಟೆಯವರೆಗೆ ಕೂಲಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಮತ್ತು ಸಾಗಾಣೆ ಮಾಡದಂತೆ ಹಾಗೂ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
Leave a comment