Home ಶಿಕ್ಷಣ ಅರಣ್ಯ ರಕ್ಷಣೆಗೆ ಜನರಲ್ಲಿ ಕಾನೂನಿನ ಅರಿವು ಅಗತ್ಯ
ಶಿಕ್ಷಣಸುದ್ದಿಗಳು

ಅರಣ್ಯ ರಕ್ಷಣೆಗೆ ಜನರಲ್ಲಿ ಕಾನೂನಿನ ಅರಿವು ಅಗತ್ಯ

Share
ಅರಣ್ಯ ರಕ್ಷಣೆ
Share

ಚಿತ್ರದುರ್ಗ: ಚಿತ್ರದುರ್ಗದ ಸುತ್ತಮುತ್ತಲಿರುವ ಅರಣ್ಯವನ್ನು ರಕ್ಷಣೆ ಮಾಡಲು ಜನರಲ್ಲಿ ಕಾನೂನಿನ ಅರಿವು ಅಗತ್ಯ, ಅರಣ್ಯ ಸಂಪತ್ತನ್ನ ಲೂಟಿ ಮಾಡುವುದು, ಒತ್ತುವರಿ ಮಾಡುವುದು, ಪ್ರಾಣಿ ಪಕ್ಷಿಗಳನ್ನ ಕೊಲ್ಲುವುದು ನಾವೇ ಮಾಡಿಕೊಂಡ ಕಾನೂನಿನ ಉಲ್ಲಂಘನೆಯಾಗುತ್ತದೆ, ಪರಿಸರ ನಾಶ ಕಾನೂನಿನ ವಿರೋಧವಾಗಿದ್ದು, ಜನರು ಇದರ ಬಗ್ಗೆ ಅರಿವುಂಟು ಮಾಡಿಕೊಂಡು, ಇರುವ ಒಂದಿಷ್ಟು ಕಾಡನ್ನ, ವನ್ಯಜೀವಿಗಳನ್ನ ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಅಪರಾಧ ಶಾಸ್ತ್ರದ ನಿವೃತ್ತ ಪ್ರಾಧ್ಯಾಪಕರಾದ ಡಾ ನಟರಾಜ್ ರವರು ಕರೆ ನೀಡಿದರು.

ಅವರು ಚಿತ್ರದುರ್ಗ ನಗರದ ಎಂಟು ಕಿಲೋಮೀಟರ್ ದೂರದಲ್ಲಿರುವ ಆಡು ಮಲ್ಲೇಶ್ವರ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವನ್ಯಜೀವಿಗಳ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಹುಲಿ, ಚಿರತೆಯ, ಆನೆಯ ಅಂಗಾಂಗಗಳನ್ನು ಕತ್ತರಿಸಿ, ಅವುಗಳ ಉಗುರನ್ನ, ದಂತವನ್ನು, ಚರ್ಮವನ್ನ ಬಳಕೆ ಮಾಡುತ್ತಿದ್ದಂತ ಸಂದರ್ಭಗಳು ಈಗ ಇಲ್ಲವಾಗಿದೆ, ಈಗ ಕಾನೂನಾತ್ಮಕವಾಗಿ ಅಂತಹ ಕಾರ್ಯಗಳು ಅಪರಾಧವಾಗುತ್ತವೆ, ಪ್ರಾಣಿ ಪಕ್ಷಿಗಳ ಚರ್ಮದಿಂದ ಮಾಡಿದಂತಹ ಕೈ ಚೀಲಗಳನ್ನ ನಿಷೇಧಿಸಲ್ಪಟ್ಟಿದ್ದರು ಸಹ ಕೆಲವೊಮ್ಮೆ ಸಿನಿಮಾ ತಾರೆಯರು ಅವುಗಳನ್ನು ಧರಿಸಿ ಪ್ರದರ್ಶನಕ್ಕೆ ಬರುವುದು ನಿಜಕ್ಕೂ ಶೋಚನೀಯ ಎಂದರು.

ಶ್ರೀಮಂತರ ಮನೆಯಲ್ಲಿ ಅನ್ಯಮಾರ್ಗದಿಂದ ಹಣ ಸಂಪಾದನೆ ಮಾಡಿದಂತವರನ್ನ ಬಂಧಿಸುವ ಸಂದರ್ಭದಲ್ಲಿ, ಮನೆಗಳಲ್ಲಿರುವ ಕಾಡಿನ ಸಂಪತ್ತುಗಳನ್ನು ಸಹ ವಶಪಡಿಸಿಕೊಳ್ಳುವಂತಹ ಕಾನೂನು ಬರಬೇಕಾಗಿದೆ, ಶ್ರೀಮಂತರ ಮನೆಗಳಲ್ಲಿ ಕಾಡುಪ್ರಾಣಿಗಳ ಕೊಂಬುಗಳನ್ನ, ಚರ್ಮದ ವಸ್ತುಗಳನ್ನ ಸಂಗ್ರಹಿಸಿ ಇಟ್ಟುಕೊಂಡಿರುವುದು ಬೆಳಕಿಗೆ ತಂದು, ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಪಶು ವೈದ್ಯರಾದ ಡಾ. ಹರೀಶ್ ರವರು ಮಾತನಾಡುತ್ತಾ ಪ್ರಾಣಿ ಪಕ್ಷಿಗಳನ್ನ ಪರಿಸರ ಮಾಲಿನ್ಯದಿಂದ ರಕ್ಷಿಸಬೇಕಾಗಿದೆ, ಹಸುವಿನ ಹೊಟ್ಟೆಯಲ್ಲಿ ಹತ್ತರಿಂದ ಹದಿನೈದು ಕೆಜಿ ಪ್ಲಾಸ್ಟಿಕ್ ದೊರಕುತ್ತಿದ್ದು, ಅವುಗಳು ಸಾವನ್ನಪ್ಪುತ್ತಿರುವುದು ಗಂಡಾಂತಕಾರಿಯಾಗಿದೆ, ಹಾವುಗಳು ಸಹ ಪ್ಲಾಸ್ಟಿಕ್ ಸೇವನೆ ಮಾಡುತ್ತಿದ್ದು, ರೇಬಿಸ್ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಪ್ರಾಣಿಗಳನ್ನ ಸಾಕುವವರು, ಪ್ರಾಣಿಗಳಿಗೂ ಮತ್ತು ಸ್ವತಃ ತಾವುಗಳು ಸಹ ರೇಬೀಸ್ ಲಸಿಕೆಯನ್ನು ಹಾಕಿಸಿಕೊಂಡು, ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು, ಬೀದಿ ನಾಯಿಗಳನ್ನ ನಿಯಂತ್ರಿಸಲು ಹಲವಾರು ಯೋಜನೆಗಳಿದ್ದು, ಯಾವುದೇ ಪ್ರಾಣಿಗಳು ಮನುಷ್ಯನನ್ನ ಕಚ್ಚಿದರೆ ರೇಬೀಸ್ ಬರುವ ಸಂಭವಗಳಿದ್ದು, ಅದರ ಬಗ್ಗೆ ಎಚ್ಚರಿಕೆವಹಿಸಿ, ಪ್ರತಿಯೊಬ್ಬರು ಲಸಿಕೆ ತೆಗೆದುಕೊಳ್ಳುವುದರ ಬಗ್ಗೆ ಜಾಗೃತರಾಗಬೇಕು ಎಂದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷ ಡಾ ಎಚ್ ಕೆ ಎಸ್ ಸ್ವಾಮಿಯವರು ಮಾತೃಭಾಷೆಯನ್ನು ತಿರಸ್ಕರಿಸಿದ್ದರಿಂದ ಜನರಿಗೆ ಸಾಮಾನ್ಯ ಜ್ಞಾನದ, ಪರಿಸರದ ಚಿಂತನೆಗಳು ಮೂಡದೆ, ಕಾಡುಗಳ ನಾಶಕ್ಕೂ ಸಹ ಕಾರಣವಾಗುತ್ತಿದೆ, ಗ್ರಾಮೀಣ ಉದ್ಯೋಗಗಳನ್ನು ರಕ್ಷಿಸಿಕೊಂಡು, ಕಾಡಿನ ನಾಶವನ್ನು ತಡೆಯಬಹುದು, ಚರಕ ಸ್ಥಳೀಯ ಉತ್ಪಾದನೆಗೆ ಅನುಕೂಲಕರವಾಗಿದ್ದು, ಕಾಡಿನ ವಸ್ತುಗಳನ್ನೇ ಬಳಸಿ ಗ್ರಾಮೀಣ ಉದ್ಯೋಗಗಳು ಬೆಳೆದುಕೊಂಡಿದ್ದವು, ದೇವರ ಹೆಸರಲ್ಲಿ ಕಾಡುಗಳನ್ನು ರಕ್ಷಣೆ ಮಾಡಿಕೊಂಡಂತ ದೇಶ, ಇಂದು ಕಾಡನ್ನ ನಾಶ ಮಾಡಲು ಮುಂದಾಗುತ್ತಿರುವುದು ಶೋಚನೀಯ ಎಂದರು.

ರಘುನಂದನ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ನೀತುರವರು ಮಾತನಾಡುತ್ತಾ ವೈದ್ಯಕೀಯ ರಂಗದಲ್ಲೂ ಸಹ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಪರಿಸರ ವಿರೋಧಿ ಜೀವನದಿಂದ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನರು ಪರಿಸರ ಸ್ನೇಹಿ ಜೀವನ ಮಾಡಿ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಇಂತಹ ಕಾಡುಗಳಿಗೆ ಬಂದು, ವಿಶ್ರಾಂತಿ ಪಡೆದು, ಮಾನಸಿಕ ನೆಮ್ಮದಿಯನ್ನು ಸಹ ಪಡೆಯಬಹುದು ಎಂದರು.

ಸ್ನೇಕ್ ಶಿವು ಮಾತನಾಡುತ್ತಾ ಹಾವುಗಳನ್ನ ರಕ್ಷಣೆಗೆ ಜನರು ಒಂದಾಗಬೇಕು, ವಿಷವಿರುವ ಹಾವುಗಳನ್ನ ರಕ್ಷಿಸಿ, ಕಾಡಿಗೆ ಬಿಡುವ ಏರ್ಪಾಡು ಮಾಡಬೇಕಾಗಿದೆ, ಹಾವಿನ ಬಗ್ಗೆ ಇರುವ ಭಯವನ್ನು ನಿವಾರಿಸಿಕೊಂಡು, ಅದರ ಜೊತೆಗೂ ನಾವು ಸ್ನೇಹದಿಂದ ಬದುಕುವುದನ್ನು ರೂಢಿ ಮಾಡಿಕೊಳ್ಳಬೇಕಾಗಿದೆ ಎಂದರು.

ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಅಕ್ಷತಾ ಐ.ಬಿ. ಮಾತನಾಡುತ್ತಾ ಅರಣ್ಯ ಇಲಾಖೆ ಸಾಕಷ್ಟು ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು ಸಹ, ಜನರು ಇನ್ನೂ ಹೆಚ್ಚಿನ ಮಟ್ಟದಲ್ಲಿ ವನ್ಯಜೀವಿ ಸಪ್ತಾಹಗಳಲ್ಲಿ ಭಾಗವಹಿಸಬೇಕು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಧೈರ್ಯ ತಾಳಬೇಕು, ಕಾಡಿಗೆ ಬಂದ ಮೇಲೆ ಪ್ರಾಣಿಗಳನ್ನು ವೀಕ್ಷಣೆ ಮಾಡಿ ಅವುಗಳ ರಕ್ಷಣೆಯ ಬಗ್ಗೆ ಮುಂದಾಗಬೇಕು. ಕಾಡುಪ್ರಾಣಿಗಳ ಅಕ್ರಮಣವಾದಾಗ ಅರಣ್ಯ ಇಲಾಖೆ ಜೊತೆ ಸಹಕರಿಸಿ, ಅವುಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕು, ನಗರಗಳು ವಿಸ್ತಾರವಾಗುತ್ತಿರುವುದರಿಂದ ಕಾಡುಪ್ರಾಣಿಗಳಿಗೆ ಆಹಾರದ ಸಮಸ್ಯೆಯಾಗಿ ಜನವಸತಿ ಕಡೆ ಬಂದಾಗ, ಜನರು ಅವುಗಳನ್ನು ಸಮಾನದಿಂದ ಕಾಡಿಗೆ ತಂದು ಇರಿಸಲು ಅವಕಾಶ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀ ವೆಂಕಟೇಶ ಭೀಮಣ್ಣ ಪಡೆದಳ್ಳಿ, ಗಸ್ತು ಅರಣ್ಯ ಪಾಲಕರಾದ ಸಂತೋಷ್ ಮಲ್ಲಾಪುರ್,
ಜೀವಶಾಸ್ತ್ರಜ್ಞೆ ಗಾನವಿ, ರಘುನಂದನ್ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.