Home ಸುದ್ದಿಗಳು ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸಕ್ಕೆ ಹೆಸರಾದವರು
ಸುದ್ದಿಗಳು

ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸಕ್ಕೆ ಹೆಸರಾದವರು

Share
Legislator M.P. Latha Mallikarjun
Share

ಹರಪನಹಳ್ಳಿ : ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸ ಹಾಗೂ ನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ತಾಲ್ಲೂಕಿನ ಮತ್ರಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಹೆಸರಿಗೆ ದೊಡ್ಡಶಕ್ತಿಯಿದೆ. ಅವರು ಬರೆದ ರಾಮಾಯಣ ಮತ್ತು ಮಹಾಭಾರತ ಪವಿತ್ರ ಗ್ರಂಥಗಳಾಗಿದ್ದು, ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.

ರಾಜ್ಯ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಕೆ.ಉಚ್ಚೆಂಗೆಪ್ಪ ಮಾತನಾಡಿ, ವಾಲ್ಮೀಕಿ ಕೇವಲ ಆದಕವಿ ಮಾತ್ರವಲ್ಲ, ಪಂಡಿತ, ಶಿಕ್ಷಣಪ್ರೇಮಿ ಮತ್ತು ಆದರ್ಶ ಶಿಕ್ಷಕರಾಗಿದ್ದರು ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಎಸ್.ರೇವಣಸಿದ್ದಪ್ಪ ಮಾತನಾಡಿ, ಜಯಂತಿಗಳು ಕೇವಲ ಜಾತಿಗಳಿಗೆ ಸೀಮಿತವಾಗದೆ, ಎಲ್ಲ ವರ್ಗದವರೂ ಒಂದುಗೂಡಿ ಮಹನೀಯರ ಜಯಂತಿ ಆಚರಿಸಿದರೆ ಮಾದರಿ ಆಗುತ್ತದೆ ಎಂದು ತಿಳಿಸಿದರು.

ಮುಖಂಡ ತಳವಾರ ಬೆಟ್ಟನಗೌಡ. ವಕೀಲ ಎಸ್.ಎಂ. ನಾಗರಾಜ, ವಿ.ಎಸ್.ಎಸ್.ಎನ್ ನಿರ್ದೆಶಕ ಸಣ್ಣ ನಿಗಪ್ಪ, ಕೊಟ್ರಗೌಡ, ಕೆ.ಪ್ರಕಾಶ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಣ್ಣ ಹೊನ್ನಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಮತ್ತಿಹಳ್ಳಿ ಶಿವಣ್ಣ, ತಾಲ್ಲೂಕು ಮಾಜಿ ಅಧ್ಯಕ್ಷ ಕಿತ್ತೂರು ಓಬಪ್ಪ, ಡಿ.ಬಸವಂತಪ್, ನಾಗರಾಜ ರಾಂಪುರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.