Home ಸುದ್ದಿಗಳು ಸಿಲಿಂಡರ್ ಕೊರತೆಯಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಡಿಸಿ ಕವಿತಾ ಎಸ್.ಮನ್ನಿಕೇರಿ
ಸುದ್ದಿಗಳು

ಸಿಲಿಂಡರ್ ಕೊರತೆಯಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಡಿಸಿ ಕವಿತಾ ಎಸ್.ಮನ್ನಿಕೇರಿ

Share
Share

ಹೊಸಪೇಟೆ (ವಿಜಯನಗರ) : ಪಾಶ್ಚಿಮಾತ್ಯ ದೇಶಗಳಲ್ಲಿನ ಯುದ್ಧದ ಸನ್ನಿವೇಶವನ್ನು ಮುಂದಿಟ್ಟುಕೊಂಡು ಗೃಹ ಬಳಕೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ವ್ಯಾಪಕವಾಗಿ ಹಬ್ಬಿವೆ. ಆದರೆ, ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಿಲ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುದ್ಧದ ನೆಪವೊಡ್ಡಿ ಗ್ಯಾಸ್ ಸಿಲಿಂಡರ್ ಕೊರತೆಯಾಗಲಿದೆ ಎಂಬ ವದಂತಿಗಳನ್ನು ಸಾರ್ವಜನಿಕರು ನಂಬಬಾರದು. ಜಿಲ್ಲೆಯಲ್ಲಿ ಯಾವುದೇ ಅನಿಲ ಕೊರತೆ ಉಂಟಾಗಿಲ್ಲ.

ಸರ್ಕಾರದ ನಿಯಮಾನುಸಾರ ಗ್ಯಾಸ್ ಏಜೆನ್ಸಿಗಳ (ಅನಿಲ ವಿತರಕ ಸಂಸ್ಥೆ) ಮೂಲಕ ಪೂರೈಕೆ ಸುಗಮವಾಗಿ ನಡೆಯಲಿದೆ. ಜಿಲ್ಲೆಯಲ್ಲಿ ಯಾರಾದರೂ ಅಕ್ರಮವಾಗಿ ಸಿಲಿಂಡರ್‌ಗಳನ್ನು ಸಂಗ್ರಹಿಸಿರುವುದು  ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಗ್ಯಾಸ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಗ್ರಾಹಕರು ನೇರವಾಗಿ ತಮ್ಮ ಅನಿಲ ವಿತರಕ ಸಂಸ್ಥೆಗಳನ್ನು ಸಂಪರ್ಕಿಸಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗಬಾರದು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಅನಿಲ ಪೂರೈಕೆ ಉದ್ಯಮದ ಮುಖ್ಯಸ್ಥರು ಉಪಸ್ಥಿತರಿದ್ದರು.

 

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.