Home ಸುದ್ದಿಗಳು ಕೇತೇಶ್ವರರ ಕಾಯಕ ನಮಗೆಲ್ಲಾ ಸ್ಪೂರ್ತಿ : ಡಾ.ಎಂ.ಪಿ.ವೀಣಾ 
ಸುದ್ದಿಗಳು

ಕೇತೇಶ್ವರರ ಕಾಯಕ ನಮಗೆಲ್ಲಾ ಸ್ಪೂರ್ತಿ : ಡಾ.ಎಂ.ಪಿ.ವೀಣಾ 

Share
medar-harapanahalli-m-p-veena
medar-harapanahalli-m-p-veena
Share

ಹರಪನಹಳ್ಳಿ : ಮೇದಾರ ಕೇತೇಶ್ವರ ಜಯಂತಿ

ಹರಪನಹಳ್ಳಿ : ಹನ್ನೆರಡನೆ ಶತಮಾನದ ಬಸವಾದಿ ಶರಣರ ದಾಸೋಹ ಪ್ರಜ್ಞೆ ನಮಗೆಲ್ಲ ಸ್ಪೂರ್ತಿಯಾಗಿದೆ ಎಂದು ಎಂ.ಪಿ.ಪ್ರಕಾಶ ಸಮಾಜಮುಖಿ ಟ್ರಷ್ಟ್‍ ಅಧ್ಯಕ್ಷೆ ಡಾ.ಎಂ.ಪಿ.ವೀಣಾ ಮಹಾಂತೇಶ ಅಭಿಪ್ರಾಯಪಟ್ಟರು.

ನಗರದಲ್ಲಿ ಮೇದಾರ ಸಮಾಜದ ಬುಧವಾರ ಆಯೋಜಿಸಿದ್ದ ಶರಣ ಮೇದಾರ ಕೇತೇಶ್ವರ 895ನೇ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮನುಜಕುಲದ ಕಾಯಕಕ್ಕೆ ಮಹತ್ವ ನೀಡಿದ ಶರಣ ಚಳವಳಿಯು, ಹಸಿದವರಿಗೆ ಅನ್ನ, ಜ್ಞಾನ ದಾಸೋಹ ಉಣಬಡಿಸಿದರು. ಅದರಲ್ಲೂ ಮೇದಾರ ಕೇತೇಶ್ವರ ಶರಣರು ಬಸವಣ್ಣನವರ ಆಪ್ತರಲ್ಲಿ ಒಬ್ಬರಾಗಿದ್ದರು. ಅವರ ಕಾಯಕ ಪ್ರಜ್ಞೆಗೆ ಅನುಭವ ಮಂಟಪವೇ ನಿಬ್ಬೆರಗಾಗಿತ್ತು. ಆಧುನಿಕ ಭರಾಟೆಯಲ್ಲಿ ಮೇದಾರರು ತಯಾರಿಸುತ್ತಿದ್ದ ಒಂದೊಂದೆ ವಸ್ತುಗಳು ಕಣ್ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಉಚ್ಚಂಗೆಪ್ಪ ಮಾತನಾಡಿ, ಗುಡಿ ಕೈಗಾರಿಕೆ, ಕೌಶಲಗಳಲ್ಲಿ ಮೇದಾರ ಸಮಾಜ ನೈಪುಣ್ಯತೆ ಪಡೆದಿದ್ದಾರೆ. ಆ ಕಲೆ ರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು. ಆಧುನಿಕತೆಯ ಸ್ಪರ್ಧಾತ್ಮಕ ಯುಗದಲ್ಲಿ ಮೇದಾರ ಕಲೆಗೆ ದಕ್ಕೆಯಾಗದಂತೆ ಕಾಪಾಡುವ ಹೊಣೆಗಾರಿಕೆ ಪ್ರತಿಯೊಬ್ಬರದ್ದಾಗಬೇಕು ಎಂದರು.

ಮೇದಾರ ಸಮಾಜದ ತಾಲ್ಲೂಕು ಅಧ್ಯಕ್ಷ ಜಿ.ಎಂ.ನಾಗರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ, ಪುರಸಭೆ ಸಸ್ಯ ಎಸ್.ಕಿರಣ್ ಕುಮಾರ ಮಾತನಾಡಿದರು. ಮೇದಾರ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಮಾರುತಿ, ಉಪಾಧ್ಯಕ್ಷ ಬಸವರಾಜ್, ತಿರುಕಪ್ಪ, ಮುಖಂಡರಾದ ಆರ್.ಲೋಕೇಶ್, ಕೆಂಗಳ್ಳಿ ಪ್ರಕಾಶ್, ಕೊಟ್ರಯ್ಯ, ಜೆಟ್ಟೆಪ್ಪ, ಕೌಟಿ ವಾಗೀಶ, ಕೆ.ಕೃಷ್ಣಪ್ಪ, ಚಿದಾನಂದ, ಮಂಜುನಾಥ, ಮಂಜುನಾಥ, ರಾಘವೇಂದ್ರ, ಮೈಲಾರಪ್ಪ, ರಾಜು, ಹುಲೇಗೇಶ್.ದುರುಗೇಶ ತೆಲಿಗಿ, ಮಹಿಳಾ ಘಟಕದ ಅಧ್ಯಕ್ಷೆ  ಅನೀತ ನಾಗರಾಜ್, ಸದಸ್ಯರಾದ ನೇತ್ರಾವತಿ, ಆರತಿ,ರೇಣುಕಮ್ಮ,ನರಸಮ್ಮ,ರುಕ್ಮಿಣಿ, ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.