Home ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರಕ್ಕೆ ಏರಿಕೆಗೆ ಆಗ್ರಹ
Homeಸುದ್ದಿಗಳು

ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರಕ್ಕೆ ಏರಿಕೆಗೆ ಆಗ್ರಹ

Share
Share

ಬೆಂಗಳೂರು: ರಾಜ್ಯ ಸರ್ಕಾರವು ಗಾರ್ಮೆಂಟ್ಸ್, ಮನೆಗೆಲಸ ಹಾಗೂ ನೈರ್ಮಲ್ಯ ಕಾರ್ಮಿಕರು ಸೇರಿದಂತೆ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿರುವುದನ್ನು ‘ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್’ (ಎಐಸಿಸಿಟಿಯು) ಸ್ವಾಗತಿಸಿದೆ. ಆದರೆ, ಪ್ರಸ್ತುತ ಮಾರುಕಟ್ಟೆಯ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನವನ್ನು ತಿಂಗಳಿಗೆ ₹42,000 ಕ್ಕೆ ನಿಗದಿಪಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಸರ್ಕಾರದ ಹೊಸ ಪರಿಷ್ಕರಣೆಯ ಅನ್ವಯ ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ವಲಯ 1: ₹23,376.43 ರಿಂದ ₹31,114.02 ರವರೆಗೆ.
  • ವಲಯ 2: ₹21,251.30 ರಿಂದ ₹28,285.47 ರವರೆಗೆ.
  • ವಲಯ 3: ₹19,319.36 ರಿಂದ ₹25,714.07 ರವರೆಗೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್, ‘ಸರ್ಕಾರದ ಈ ವೇತನ ಪರಿಷ್ಕರಣೆ ಕ್ರಮವು ಸ್ವಾಗತಾರ್ಹ. ಆದರೆ, ಪ್ರಸ್ತುತ ದಿನಮಾನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಿತಿಮೀರಿದ್ದು, ಶ್ರಮಿಕ ವರ್ಗದ ಜೀವನ ನಿರ್ವಹಣಾ ವೆಚ್ಚ ದುಬಾರಿಯಾಗಿದೆ. ಹೀಗಾಗಿ ಮಾಸಿಕ ₹42 ಸಾವಿರ ಕನಿಷ್ಠ ವೇತನ ನೀಡುವತ್ತ ಸರ್ಕಾರ ಗಂಭೀರವಾಗಿ ಚಿಂತಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಪರಿಷ್ಕೃತ ವೇತನವು ಕೇವಲ ಆದೇಶಕ್ಕೆ ಸೀಮಿತವಾಗದೆ, ಎಲ್ಲಾ ವಲಯಗಳಲ್ಲಿ ಕಾರ್ಮಿಕರಿಗೆ ಕಟ್ಟುನಿಟ್ಟಾಗಿ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು. ಯಾವುದೇ ಕಾರಣಕ್ಕೂ ಕಾರ್ಮಿಕರ ಶೋಷಣೆಯಾಗದಂತೆ ಎಚ್ಚರವಹಿಸಬೇಕು’ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.